ಕರಾವಳಿ

ವಿದ್ವಂಸಕ ಕೃತ್ಯಕ್ಕೆ ಸಂಚು ಶಂಕೆ?.. : ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ತಪಾಸಣೆ

Pinterest LinkedIn Tumblr

ಮಂಗಳೂರು ಆಗಸ್ಟ್ 10: ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ರೈಲ್ವೇ ಪೊಲೀಸ್‍ದಳ, ನಗರ ಪೊಲೀಸ್, ಬಾಂಬ್ ತಪಾಸಣಾ ತಂಡ ಶ್ವಾನದಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಸಂಜೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣೆ ನಡೆಯಿತು.

ನಿಲ್ದಾಣದ ಪ್ಲಾಟ್‍ಫಾರ್ಮ್ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಆರ್.ಪಿ.ಎಫ್ ಅಧಿಕಾರಿ ಅಜಯ್ ಕುಮಾರ್ ನೇತೃತ್ವ ವಹಿಸಿದ್ದರು.

Comments are closed.