ಕರಾವಳಿ

ಮಂಗಳೂರಿನಲ್ಲಿಂದು ನ್ಯೂರೋ ಸೆನ್ಸರಿ ಡೆವಲಪ್ ಮೆಂಟ್ ಥೆರಪಿ ಸಂಚಾರಿ ಘಟಕ ಉದ್ಘಾಟನೆ

Pinterest LinkedIn Tumblr

ಮಂಗಳೂರು. ಆಗಸ್ಟ್.10 : ಸಮಾಜಮುಖಿ ಸೇವಾ ಸಂಘಟನೆ ಸೇವಾಭಾರತಿ ಮಂಗಳೂರು ಇದರ ವತಿಯಿಂದ ನ್ಯೂರೋ ಸೆನ್ಸರಿ ಡೆವಲಪ್ ಮೆಂಟ್ ಥೆರಪಿ ಸಂಚಾರಿ ಘಟಕ ಅಗಸ್ಟ್ 10, ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ನ್ಯೂರೋ ಸೆನ್ಸರಿ ಡೆವಲಪಮೆಂಟ್ ಥೆರಪಿ ಘಟಕ ವನ್ನು ಉದ್ಘಾಟಿಸಲಿದ್ದಾರೆ.

ಎಂಆರ್ಎ ಲ್ ಸಮೂಹ ಪ್ರಭಂದಕ (ಮಾನವ ಸಂಪನ್ಮೂಲ) ಬಿ.ಎಚ್.ವಿ. ಪ್ರಸಾದ್ ಅವರು  ಬಸ್ ಅನ್ನು ಸೇವಾಭಾರತಿಗೆ ಹಸ್ತಾಂತರಿಸಲಿದ್ದಾರೆ. ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಉಪಸ್ಥಿತರಿರುವರು.

ನ್ಯೂರೋ ಸೆನ್ಸರಿ ಡೆವಲಪ್ ಮೆಂಟ್ ಥೆರಪಿ ಸಂಚಾರಿ ಘಟಕ ಸುಧಾರಿತ ಫಿಸಿಯೋಥೆರಪಿ ಚಿಕಿತ್ಸಾ ವ್ಯವಸ್ಥೆ ಇಲ್ಲದಿರುವ ಗ್ರಾಮೀಣ ಪ್ರದೇಶಗಳಲ್ಲಿ ದಿವ್ಯಾಂಗರ ಮನೆ ಬಾಗಿಲಿಗೆ ಭೇಟಿ ಕೊಟ್ಟು, ಮಕ್ಕಳ ಎಳವೆಯಲ್ಲಿಯೇ ವೈಕಲ್ಯಗಳ ಪತ್ತೆ ಹಚ್ಚುವಿಕೆ, ಅವಶ್ಯಕ ಫಿಸಿಯೋಥೆರಪಿ ಮತ್ತು ಸ್ವೀಚ್ ಥೆರಪಿ ಚಿಕಿತ್ಸೆ ಕೊಡುವುದು ಮತ್ತು ಅನುವರ್ತಿ ಕಾರ್ಯ ಕೈಗೊಳ್ಳುವುದು ಮಾಡಲಿದೆ.

ಮಂಗಳೂರಿನಿಂದ 56 ಕಿ.ಮೀ ವ್ಯಾಪ್ತಿಯಲ್ಲಿರುವ ಬಿ.ಸಿ.ರೋಡ್, ಬಂಟ್ವಾಳ, ಪುತ್ತೂರು, ಗುರುಪುರಕ್ಕೆ ವಾರಕ್ಕೆ ಒಂದು ಅಥವಾ ಎರಡು ಬಾರಿ ಹೋಗಿ ಫಿಸಿಯೋಥೆರಪಿ ಹಾಗೂ ಸ್ವೀಚ್ ಥೆರಪಿಗೆ ಹಲವಾರು ವರ್ಷಗಳಿಂದ ಚಿಕಿತ್ಸೆ ಕೊಡಲಾಗುತ್ತಿರುವುದು ಇದರ ಉಪಯುಕ್ತತೆಯನ್ನು ಹೆಚ್ಚಿಸಲು, ಸರಕಾರದ ಯೋಜನೆಯಾದ ಸರ್ವ ಶಿಕ್ಷಣ ಅಭಿಯಾನದ ಸಹಕಾರದಿಂದ ಫಲಾನುಭವಿಗಳ ವ್ಯಾಪ್ತಿಕ್ಷೇತ್ರವನ್ನು ವಿಸ್ತರಿಸಲಾಗುವುದು.

ಸೆರೆಬ್ರಲ್ ಪಾಲ್ಸಿ, ಡಿಲೇಯ್ಡ್ ಮೈಲ್ ಸ್ಟೋನ್, ಡೌನ್ ಸಿಂಡ್ರೋಮ್, ಕಾಟಿಸಂ ಡಿಸಾರ್ಡರ್ ಇರುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುವುದು. ಕಿರು ವಯಸ್ಸಿನಲ್ಲಿಯೇ ನ್ಯೂನತೆಯನ್ನು ಪತ್ತೆ ಹಚ್ಚುವಿಕೆಯಲ್ಲಿ ಶಿಕ್ಷಕರಿಗೆ ವರ್ಗಗಳನ್ನು ನಡೆಸುವುದು ಮತ್ತು ಹೆತ್ತವರಿಗೆ ಸಲಹೆ, ಸೂಚನೆಗಳನ್ನು ಕೊಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಸೇವಾಭಾರತಿ ಪ್ರಕಟನೆ ತಿಳಿಸಿದೆ.

Comments are closed.