ಕರಾವಳಿ

ನಾಳೆ ಶ್ರೀ ಕೃಷ್ಣ ಜನ್ಮಷ್ಟಮಿ ಸಂಭ್ರಮ : ಮಂಗಳೂರಿನಲ್ಲಿ ಹೂ, ಹಣ್ಣು, ತರಕಾರಿ ಹಾಗೂ ಮೂಡೆಗಳ ಭರ್ಜರಿ ಮಾರಾಟ

Pinterest LinkedIn Tumblr

ಮಂಗಳೂರು,ಆಗಸ್ಟ್.22 : ನಾಳೆ ಆಗಸ್ಟ್ 23 ಶುಕ್ರವಾರ ದೇಶಾದಾದ್ಯಂತ ಶ್ರೀ ಕೃಷ್ಣ ಜನ್ಮಷ್ಟಮಿ ಸಂಭ್ರಮ. ಮಂಗಳೂರಿನಲ್ಲಿ ಈಗಾಗಲೇ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದಕ್ಕೆ ತಕ್ಕಂತೆ ವರುಣ ದೇವ ಕೂಡ ಸ್ವಲ್ಪ ಬಿಡುವು ಮಾಡಿರುವುದು ಎಲ್ಲರಲ್ಲಿ ಸಂತಸ ಮೂಡಿಸಿದೆ.

ಶ್ರೀ ಕೃಷ್ಣ ಜನ್ಮಷ್ಟಮಿ ಹಬ್ಬದ ಪ್ರಯುಕ್ತ ಗುರುವಾರ ನಗರದಲ್ಲಿ ಹೂ, ಹಣ್ಣು, ತರಕಾರಿ ಹಾಗೂ ಮೂಡೆಗಳ ಮಾರಾಟ ಭರ್ಜರಿಯಾಗಿ ನಡೆಯಿತು. ನಗರದ ಸೆಂಟ್ರಲ್ ಮಾರ್ಕೆಟ್ ಸೇರಿದಂತೆ ನಗರದ ಪ್ರತಿಷ್ಠಿತ ಮಾಲ್ ಗಳು ಹಾಗೂ ವಿವಿಧ ಮಾರುಕಟ್ಟೆಗಳಲ್ಲಿ ಗ್ರಾಹಕರು ಭರ್ಜರಿ ಖರೀದಿಯಲ್ಲಿ ತೊಡಗಿರುವುದು ಕಂಡು ಬಂತು.

ನಾಗಾರ ಪಂಚಮಿ ಬಳಿಕ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಹೂ, ಹಣ್ಣು, ತರಕಾರಿಗಳ ಬೆಲೆ ಗಗನಕೇರಿದ್ದರೂ.. ಗ್ರಾಹಕರು ಮಾತ್ರ ಯಾವೂದೇ ಗೊಂದಲವಿಲ್ಲದೇ ವರ್ಷಕ್ಕೊಮ್ಮೆ ಬರುವ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಬೆಲೆ ಹೆಚ್ಚಾದರೂ ಎಂದಿನಂತೆ ಖರೀದಿಯಲ್ಲಿ ನಿರತರಾಗಿದ್ದರು.

Comments are closed.