ಕರಾವಳಿ

ಕೃಷ್ಣನೂರಿನಲ್ಲಿ ಅಷ್ಟಮಿ ಗೌಜಿ: ಶ್ರೀಕೃಷ್ಣ ಮಠದಲ್ಲಿನ ಇಡೀ ದಿನದ ಅಪ್ಡೆಟ್ಸ್ ಇಲ್ಲಿದೆ ನೋಡಿ!

Pinterest LinkedIn Tumblr

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಜಯಂತಿಯ ವಿಟ್ಲಪಿಂಡಿಯಂದು ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ವತಿಯಿಂದ ನಡೆಯುವ ಅನ್ನಸಂತರ್ಪಣೆಗೆ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಮುಂಭಾಗದಲ್ಲಿ ಪ್ರಾರ್ಥನೆ ನೆರವೇರಿಸಿದ ನಂತರ ಭೋಜನಶಾಲೆಯಲ್ಲಿ ತರಕಾರಿ ಹಚ್ಚುವ ಮುಹೂರ್ತ ನಡೆಯಿತು. ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ಭುವನೇಂದ್ರ ಕಿದಿಯೂರು,ಯುವರಾಜ್ ಮಸ್ಕತ್ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಕೃಷ್ಣ ಮಠದಲ್ಲಿ ಕೃಷ್ಣ ಜಯಂತಿಯ ವಿಟ್ಲಪಿಂಡಿ ಉತ್ಸವದ ದೇವರ ಮೃಣ್ಮಯ ಮೂರ್ತಿ ಕಂಗೊಳಿಸುತ್ತಿತ್ತು.

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ರಾತ್ರಿ ಪೂಜೆ ನೆರವೇರಿಸಿದರು.

Comments are closed.