ಕರಾವಳಿ

ಮನಪಾ : ನೂತನ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅಧಿಕಾರ ಸ್ವೀಕಾರ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್ 17: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆಯವರನ್ನು ರಾಜ್ಯ ಸರಕಾರ ನೇಮಕಗೊಳಿಸಿದ್ದು, ಮಂಗಳವಾರ ಅವರು ಅಧಿಕಾರ ಸ್ವೀಕರಿಸಿದರು.

ಮನಪಾ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿತ್ತು.

ಮಂಗಳವಾರ ಅಧಿಕಾರ ಸ್ವೀಕರಿಸಿದ ಮನಪಾ ನೂತನ ಆಯುಕ್ತ ಅಜಿತ್ ಕುಮಾರ್ ಹೆಗ್ಡೆಯವರಿಗೆ ನಿರ್ಗಮನ ಅಯುಕ್ತರಾದ ಮುಹಮ್ಮದ್ ನಝೀರ್ ಅಧಿಕಾರ ಹಸ್ತಾಂತರಿಸಿದರು.

ಈ ಹಿಂದೆ ಕೂಡ ಇವರು ಮಂಗಳೂರು ಮಹಾನಗರ ಪಾಲಿಕೆ ಅಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಎರಡನೇ ಬಾರಿಗೆ ಮತ್ತೊಮ್ಮೆ ಶಾನಾಡಿ ಅಜಿತ್ ಕುಮಾರ್ ಹೆಗ್ಡೆಯವರು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ನಿಯುಕ್ತಿಗೊಂಡಿದ್ದಾರೆ.

ಅಜಿತ್‌ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಮಂಗಳೂರಿನ ಮೂಡಾದಲ್ಲಿ ಅಯುಕ್ತರಾಗಿ ಸೇವೆ ಸಲ್ಲಿಸಿದ್ದರು.

Comments are closed.