ಮಂಗಳೂರು : ನಮ್ಮ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ದ 97ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನಂತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠ ದ ವಸಂತ ಮಂಟಪದಲ್ಲಿ ಸಕಲ ಸಾಂಸ್ಕ್ರತಿಕ ಮತ್ತು ಧಾರ್ಮಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹದ ಪ್ರತಿಷ್ಠಾಪನೆ ನೆರವೇರಿತು.
6 ದಿನಗಳ ಪರ್ಯಂತ ಶ್ರೀ ದೇವಳದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವತ್ ಭಕ್ತರು ತನು , ಮನ, ಧನಗಳಿಂದ ಪಾಲ್ಗೊಂಡು ಶ್ರೀ ದೇವಿಯ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಸಮಿತಿಯ ಅಧ್ಯಕ್ಷರಾದ ಡಾ. ಯು. ಉಮಾನಂದ ಮಲ್ಯ ಕೇಳಿಕೊಂಡಿರುತ್ತಾರೆ .
ಚಿತ್ರ : ಮಂಜು ನೀರೇಶ್ವಾಲ್ಯ
Comments are closed.