ಕರಾವಳಿ

ಕನ್ನಡ ರಾಜ್ಯೋತ್ಸವ ಸಭೆ: ನಾಡಹಬ್ಬಕ್ಕೆ ಚ್ಯುತಿ ಬಾರದಂತೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

Pinterest LinkedIn Tumblr

ಮಂಗಳೂರು : 2019ನೇ ಸಾಲಿನ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆ ಸಮನ್ವಯದಿಂದ ಕಾರ್ಯೋನ್ಮುಖರಾಗಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಡಹಬ್ಬಕ್ಕೆ ಚ್ಯುತಿ ಬಾರದಂತೆ ವಿಜೃಂಭಣೆಯಿಂದ ಆಚರಿಸಬೇಕು. ಹಿಂದಿನ ವರ್ಷಗಳಲ್ಲಿ ಶಿಸ್ತುಬದ್ದವಾಗಿ ಆಚರಿಸಿಕೊಂಡು ಬಂದಂತೆ ಈ ಸಾಲಿನಲ್ಲಿಯೂ ಕೂಡಾ ಭುವನೇಶ್ವರಿಯ ಭಾವಚಿತ್ರವನ್ನು ಮೆರವಣಿಗೆಯ ಮೂಲಕ ಬೆಳಿಗ್ಗೆ ಅಂಬೇಡ್ಕರ್ ವೃತ್ತದಿಂದ ಪ್ರಾರಂಭಿಸಿ ನೆಹರೂ ಮೈದಾನಕ್ಕೆ ತಲುಪಿಸಲು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ನೆಹರು ಮೈದಾನದಲ್ಲಿ ಕನ್ನಡ ರಾಜೋತ್ಸವದ ದ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಿ ಸಂದೇಶ ನೀಡಲಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿ ನಾಡಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸುವಂತೆ ಜಿಲ್ಲಾಧಿಕಾರಿಗಳು ಹೇಳಿದರು.

ಮೆರವಣಿಗೆಯಲ್ಲಿ ಭಾಗವಹಿಸುವ ಟ್ಯಾಬ್ಲೋ ರಚಿಸಿ ಸುಸೂತ್ರವಾಗಿ ಮೆರವಣಿಗೆ ನಿರ್ವಹಿಸಬೇಕು. ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ತುಳು ಸಾಹಿತ್ಯ ಅಕಾಡೆಮಿ, ದ.ಕ.ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಧಾರ್ಮಿಕ ದತ್ತಿ ಇಲಾಖೆ, ಮಹಾನಗರ ಪಾಲಿಕೆ, ವಾರ್ತಾ ಇಲಾಖೆಯು ಜನಜಾಗೃತಿ ಮೂಡಿಸುವಂತಹ ಟ್ಯಾಬ್ಲೊಗಳನ್ನು ತಯಾರಿಸಬೇಕು. ಟ್ಯಾಬ್ಲೋ ವಿಷಯವನ್ನು ಅಕ್ಟೋಬರ್ 9 ರೊಳಗೆ ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಎಂ ಜೆ ರೂಪ ಸೂಚನೆ ನೀಡಿದರು.

ಮೆರವಣಿಗೆಯ ಸಂಧರ್ಭದಲ್ಲಿ ಯಾವುದೇ ರೀತಿಯ ಸಂಚಾರ ಸಮಸ್ಯೆ ಉಂಟಾಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಿಕೊಳ್ಳಬೇಕು. ಪುರಭವನದಲ್ಲಿ ಸಂಜೆ 3.30 ಗಂಟೆಗೆ ಸಾಂಸ್ಹøತಿಕ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಸುಮಾರು 700 ವಿದ್ಯಾಥಿಗಳು ಹಾಗೂ ಇತರ ಸಂಘ ಸಂಸ್ಥೆಗಳು ಭಾಗವಹಿಸಲಿದ್ದು, ಕಲಾವಿದರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಶೌಚಲಯ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಿಕೊಡಬೇಕು. ಜಿಲ್ಲಾ ಮಟ್ಟದ ಕನ್ನಡ ರಾಜೋತ್ಸವ ಆಚರಣೆಯ ಸಂಧರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗೆ ಅರ್ಜಿಗಳನ್ನು ಅಕ್ಟೋಬರ್ 19 ರೊಳಗೆ ನೀಡಬೇಕು ಎಂದು ಅಪರ ಜಿಲ್ಲಾ ಅಧಿಕಾರಿ ಹೇಳಿದರು. ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Comments are closed.