ಕರಾವಳಿ

ಡಾ. ಕದ್ರಿ ಗೋಪಾಲನಾಥ ಮನೆಗೆ ಜಿಲ್ಲಾಧಿಕಾರಿ ಹಾಗೂ ಮನಪಾ ಅಯುಕ್ತರ ಭೇಟಿ :ಕುಟುಂಬಸ್ಥರಿಗೆ ಸಾಂತ್ವನ

Pinterest LinkedIn Tumblr

ಮಂಗಳೂರು ಅಕ್ಟೋಬರ್ 12 : ಶುಕ್ರವಾರ ಮುಂಜಾನೆ ನಿಧನರಾದ ಹಿರಿಯ ಸಂಗೀತ ಕಲಾವಿದ, ಪದ್ಮಶ್ರೀ ಪುರಸ್ಕೃತ ಡಾ. ಕದ್ರಿ ಗೋಪಾಲನಾಥ ಅವರ ಮನೆಗೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಶುಕ್ರವಾರ ಭೇಟಿ ನೀಡಿದರು.

ಮೃತರ ಕುಟುಂಬಸ್ಥರನ್ನು ಭೇಟಿಯಾದ ಜಿಲ್ಲಾಧಿಕಾರಿಗಳು, ಸಾಂತ್ವನ ಹೇಳಿದರು. ಅಲ್ಲದೇ ಮೃತರ ಅಂತ್ಯಕ್ರಿಯೆ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.

Comments are closed.