ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಸುಳ್ಯಕ್ಕೆ ಮೊದಲ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು / ಸುಳ್ಯ ” ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಸುಳ್ಯಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಸುಳ್ಯದ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಈ ಸಂದರ್ಭ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮುಖಂಡರಾದ ಎ.ವಿ.ತೀರ್ಥರಾಮ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಸುಭೋದ್ ಶೆಟ್ಟಿ ಮೇನಾಲ, ಸುರೇಶ್ ಕಣೆಮರಡ್ಕ, ಮುಳಿಯ ಕೇಶವ ಭಟ್, ಸಂತೋಷ್ ಜಾಕೆ, ಹರೀಶ್ ಉಬರಡ್ಕ , ಶೈಲೇಶ್ ಅಂಬೆಕಲ್ಲು, ಚಂದ್ರಾ ಕೋಲ್ಚಾರು, ಭಾಗೀರಥಿ ಮುರುಳ್ಯ, ಎನ್.ಎ.ರಾಮಚಂದ್ರ, ಜಯರಾಮ ರೈ , ಪಿ.ಕೆ.ಉಮೇಶ್, ಪ್ರಕಾಶ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Comments are closed.