ಕರಾವಳಿ

ಪ್ರತ್ಯೇಕ ಮೂರು ಪ್ರಕರಣ- ಗಾಂಜಾ ಸೇವನೆ ಪ್ರಕರಣದಲ್ಲಿ ಮೂವರ ಬಂಧನ

Pinterest LinkedIn Tumblr

ಉಡುಪಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 2 ಹಾಗೂ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

(ಸಾಂದರ್ಭಿಕ ಚಿತ್ರ)

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮ್ರಗೋಡು ಶಾಲೆಯ ಬಳಿ ಆರೋಪಿಯು ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು ಪೊಲಿಸರು ಸ್ಥಳಕ್ಕೆ ಹೋಗಿ ಆರೋಪಿಯನ್ನು ವಿಚಾರಿಸಿದಾಗ, ತಾನು ಗಾಂಜಾ ಸೇವನೆ ಮಾಡಿರುವ ಬಗ್ಗೆ ತಿಳಿಸಿದ್ದ. ಆರೋಪಿಯಾದ ವಿನಾಯಕ ಪ್ರಭು (30) ಎನ್ನುವಾತನನ್ನು ವಶಕ್ಕೆ ಪಡೆದು ಮಣಿಪಾಲ ಕೆಎಮ್‌ಸಿ ಆಸ್ಪತ್ರೆಯ ಫೊರೆನ್ಸಿಕ್‌ ಮೆಡಿಸಿನ್‌ ವಿಭಾಗದ ತಜ್ಞರ ರಿಂದ ಆರೋಪಿಯನ್ನು ಪರೀಕ್ಷಿಸಿದ್ದು, ಆರೋಪಿಯು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈಧ್ಯರು ಧೃಡಿಕರಿಸಿ ಅ.16 ರಂದು ವರದಿ ನೀಡಿದ್ದು ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ವಾರಂಬಳ್ಳಿ ಗ್ರಾಮದ, ಬ್ರಹ್ಮಾವರ ಗಾಂಧಿ ಮೈದಾನದ ಬಳಿ ಬೆಳಿಗ್ಗೆ 10:15 ಗಂಟೆಯ ಸಮಯಕ್ಕೆ ಆರೋಪಿಯನ್ನು ಹಿಡಿದು ವಿಚಾರಿಸಿದಾಗ, ತಾನು ಗಾಂಜಾ ಸೇವನೆ ಮಾಡಿರುವ ಬಗ್ಗೆ ತಿಳಿಸಿದ್ದು ಆರೋಪಿ ಆದರ್ಶ ನಾಯಿರಿ, (24) ಎನ್ನುವಾತನನ್ನು ವಶಕ್ಕೆ ಪಡೆದು ಮಣಿಪಾಲ ಕೆಎಮ್‌ಸಿ ಆಸ್ಪತ್ರೆಯ ಫೊರೆನ್ಸಿಕ್‌ ಮೆಡಿಸಿನ್‌ ವಿಭಾಗದ ತಜ್ಞರ ರಿಂದ ಆರೋಪಿಯನ್ನು ಪರೀಕ್ಷಿಸಿದ್ದು, ಆರೋಪಿಯು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈಧ್ಯರು ಧೃಡಿಕರಿಸಿ ಅ.16 ರಂದು ವರದಿ ನೀಡಿದ್ದರಿಂದ ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಲೆವೂರು ಗ್ರಾಮದ ಪ್ರಗತಿನಗರ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬನು ಗಾಂಜಾ ಸೇವನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದಾಗ ಆತನು ಅಮಲಿನಲ್ಲಿರುವುದು ಕಂಡು ಬಂದಿದ್ದು, ವಿಚಾರಿಸಿದಾಗ ಆತನು ಮಾತನಾಡಲು ತೊದಲುತ್ತಿದ್ದು, ಆತನ ಬಾಯಿಯಿಂದ ಗಾಂಜಾದಂತಹ ಘಾಟು ವಾಸೆ ಬರುತಿತ್ತು. ಆತನು ಮಾದಕ ವಸ್ತು ಸೇವನೆ ಮಾಡಿದ ಅನುಮಾನದ ಮೇರೆಗೆ ಆತನನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದುಕೊಂಡಿದ್ದು ಉಡುಪಿ ಅಲೆವೂರು ನಿವಾಸಿ ಪ್ರತಾಪ್‌‌, (20) ಬಂಧಿತ ಆರೋಪಿ. ಆತನನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಪ್ರೊಫೆಸರ್ ಅಂಡ್ ಹೆಡ್ ಇವರ ಮುಂದೆ ಹಾಜರು ಪಡಿಸಿದ್ದು ಆತನನ್ನು ಪರೀಕ್ಷಿಸಿದ ವೈದ್ಯರು ಆತನು ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರವನ್ನು ನೀಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.