
ಅನಿವಾಸಿ ಕನ್ನಡಿಗರು ಕರ್ನಾಟಕದ ನಾಡ ಹಬ್ಬ ‘ಕನ್ನಡ ರಾಜ್ಯೋತ್ಸವ’ ವನ್ನು ಸಂಭ್ರಮದಿಂದ ಆಚರಿಸುತ್ತಾರೆ. ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08 ರಂದು 64ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿರುತ್ತೆ. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ.
ನವೆಂಬರ್ 08ರಂದು ಸಂಜೆ 4.30 ಗಂಟೆಗೆ ದುಬೈ ಮೇದಾನ್ ನಾದ್ ಅಲ್ ಶೀಬಾದಲ್ಲಿರುವ ಹಾರ್ಟ್ ಲ್ಯಾಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡಿಗರು ಒಟ್ಟುಗೂಡಿ ನಾಡಹಬ್ಬ ಆಚರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ 2019ನೇ ಸಾಲಿನ ‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ದುಬೈನಲ್ಲಿ ಭಾರತದ ರಾಯಭಾರಿ ವಿಪುಲ್ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಗಿಲ್ 1999ರ ಯುದ್ಧದಲ್ಲಿ ಸೆಣೆಸಿದ ಸೇನಾಧಿಕಾರಿ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಅತಿಥಿಗಳಾಗಿದ್ದಾರೆ. ಶ್ರೀ ಮುಸ್ತಾಫಾ ಮಹಮ್ಮದ್, ಉದ್ಯಮಿ ಹಾಗೂ ಕನ್ನಡಿಗರು ದುಬೈ ಪೋಷಕರು, ಫಾರ್ಚ್ಯೂನ್ ಹೋಟೆಲ್ಸ್ ಗ್ರೂಪಿನ ನಿರ್ವಕ ನಿರ್ದೇಶಕರಾದ ಶ್ರೀ ರವೀಶ್ ಗೌಡ , ಶ್ರೀಮತಿ ದರ್ಶನಿ ಮಂಜುನಾಥ್ ನೃತ್ಯ ದಿಷಾ ಟ್ರಸ್ಟ್ ಹಾಗು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.


ಈ ಕಾರ್ಯಕ್ರಮವನ್ನು ಕನ್ನಡದ ಖ್ಯಾತ ರೇಡಿಯೊ ಮಿರ್ಚಿ ಹಾಗೂ ಕನ್ನಡ ಕೋಗಿಲೆ ನಿರೂಪಕಿಯಾದ ಆರ್ ಜೆ ಸಿರಿ ನೆರವೇಸಿಲ್ಲಿದ್ದಾರೆ. ಈ ಸಂದರ್ಭದಲ್ಲಿ ನೃತ್ಯ ದಿಷಾ ಟ್ರಸ್ಟ್ ಬೆಂಗಳೂರು ತಂಡದಿದ ಹಾಗೂ ಯುನೈಟೆಡ್ ಅರಬ್ ಎಮಿರೇಟಿನಲ್ಲಿ ನೆಲೆಸಿರುವ ಕನ್ನಡ ಶಾಲಾ ಮಕ್ಕಳು ನೃತ್ಯ, ಸಂಗೀತ ಹಾಗೂ ಮುಂತಾದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ರಂಜಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ ಎಂದು ಕನ್ನಡಿಗರು ದುಬೈ ಸಂಘದ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಅವರು ತಿಳಿಸಿದ್ದಾರೆ. ಸಮಸ್ತ ಕನ್ನಡಿಗರು ಈ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕಾಗಿ ಆಯೋಜಕರು ಕೋರಿದ್ದಾರೆ.
ಈ ಕಾರ್ಯಕ್ರಮದ ಘೋಷಣೆಗಾಗಿ ಫಾರ್ಚೂನ್ ಗ್ರಾಂಡ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡಿಗರು ದುಬೈ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಮಾಜಿ ಅಧ್ಯಕ್ಷರುಗಳಾದ ವೀರೇಂದ್ರ ಬಾಬು, ಸದನ್ ದಾಸ್, ಉಮಾ ವಿದ್ಯಾಧರ್, ಹಾಗು ಕನ್ನಡಿಗರು ದುಬೈ ಸಮಿತಿ ಸದಸ್ಯರುಗಳಾದ ಅರುಣ್ ಕುಮಾರ್, ದೀಪಕ್ ಸೋಮಶೇಖರ್, ಚಂದ್ರಕಾಂತ್ ಗೌಡ, ವಿಜಯ ಶಿವರುದ್ರಪ್ಪ, ಮಮತಾ ರಾಘವೇಂದ್ರ, ಮಲ್ಲಿಕಾರ್ಜುನ ಅಂಗಡಿ, ಶ್ರೀನಿವಾಸ್ ಅರಸ್, ವೆಂಕಟರಮಣ ಕಾಮತ್, ರಫೀಕಲಿ ಕೊಡಗು, ವಿನೀತ್ ರಾಜ್, ಮಧು ಗೌಡ, ಚಂದ್ರಶೇಖರ್ ಪೂಜಾರಿ ಹಾಜರಿದ್ದರು.
ಹಾಗೆ ಇತರ ಸಂಘ ಸಂಸ್ಥೆಗಳ ಪ್ರಮುಖರಾದ ಸತೀಶ್ ಹೈನ್ದರ್, ಪ್ರಕಾಶ್ ಪಯ್ಯಾರ್, ಮನೋಹರ್ ಹೆಗಡೆ, ಸುಗಂಧ ರಾಜ್ ಬೇಕಲ್, ಸುಮೀನ್ದ್ರ ಹೇಮಾದ್ರಿ, ಆಶಾ ಲಕ್ಷ್ಮಿ, ಖಲೀಲ್ ರಹ್ಮಾನ್ ಉದಯ್ ನಂಜಪ್ಪ, ಬಾನು ಕುಮಾರ್, ನಾಗರಾಜ್ ರಾವ್, ಮತ್ತು ಮಾಧ್ಯಮ ಮಿತ್ರರಾದ ಸಿರಾಜ್, ಸುಜಿತ್ ಮತ್ತು ಇಮ್ರಾನ್ ಅವರು ಹಾಜರಿದ್ದರು
Comments are closed.