ಕರಾವಳಿ

ಮಂಜೇಶ್ವರ ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಮಂಗಳೂರು ಅಕ್ಟೋಬರ್ 18 : ಅಕ್ಟೋಬರ್ 21 ರಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಉಪ-ಚುನಾವಣೆ ನಡೆಯಲಿರುವು ದರಿಂದ, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು ತಾಲೂಕು ಪ್ರದೇಶಗಳ 5 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿ/ಬಾರ್ ಸನ್ನದುಗಳನ್ನು ನಿನ್ನೆ ಸಂಜೆಯಿಂದ ಅಕ್ಟೋಬರ್ 21 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಅಕ್ಟೋಬರ್ 24 ರಂದು ನಡೆಯಲಿರುವ ಮತಣಿಕೆಯ ದಿನದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ.

ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಮತ್ತು ಮಾರಾಟ ಕೇಂದ್ರಗಳನ್ನು ಮುಚ್ಚಲು ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಯಾವುದೇ ಹೊಟೇಲುಗಳಲ್ಲಾಗಲೀ, ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೊಟೇಲ್‍ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.

Comments are closed.