ಕರಾವಳಿ

ಡಿಕೆಶಿಗೆ ಜಾಮೀನು: ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು

Pinterest LinkedIn Tumblr

ಉಡುಪಿ: ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ನ್ಯಾಯಾಲಯ ಬುಧವಾರ ಜಾಮೀನು ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

   

ಉಡುಪಿ ತ್ರೀವೇಣಿ ಸರ್ಕಲ್ ಬಳಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಬಾವುಟ ಹಿಡಿದು ಡಿ ಕೆ ಶಿವಕುಮಾರ್ ಪರ ಜೈಕಾರ ಹಾಕಿದರು ಮತ್ತು ಬಿಜೆಪಿಯ ದ್ವೇಷ ರಾಜಕೀಯ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಡಿಕೆಶಿ ಜಾಮೀನು ಸಿಕ್ಕಿದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.

ಈ ವೇಳೆ ನಗರ ಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಕಿಶನ್ ಹೆಗ್ಡೆ,ಹರೀಶ್ ಕಿಣಿ, ನರಸಿಂಹ ಮೂರ್ತಿ, ಯತೀಶ್ ಕರ್ಕೇರ, ಗಣೇಶ್ ನೆರ್ಗಿ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.

ಕೋಟೇಶ್ವರದಲ್ಲಿ ಸಂಭ್ರಮ..
ಕುಂದಾಪುರ ತಾಲೂಕಿನ ಕೋಟೆಶ್ವರದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಬೀಜಾಡಿ ಮುಂದಾಳತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ವೇಳೆ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.