ಕರಾವಳಿ

ಉಡುಪಿಯಲ್ಲಿ ಮುಂದುವರಿದ ವರುಣನ ಆರ್ಭಟ: ಅ.26 ಶನಿವಾರವೂ ಶಾಲಾ-ಕಾಲೇಜುಗಳಿಗೆ ರಜೆ

Pinterest LinkedIn Tumblr

ಉಡುಪಿ: ಕಳೆದೆರಡು ದಿನಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ( ಅ.26) ಶನಿವಾರ ಜಿಲ್ಲಾಧಿಕಾರಿ ಜಗದೀಶ್ ಅವರು ರಜೆ ಘೋಷಿಸಿದ್ದಾರೆ. ಕಳೆದ ಎರಡು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದಿಂದ ಉಡುಪಿ ಜಿಲ್ಲೆಯಯಾದ್ಯಂತ ತೀವ್ರ ಗಾಳಿ ಮಳೆಯಾಗುತ್ತಿದೆ. ಇನ್ನು ನಾಳೆಯೂ ಕೆಲವು ಪರೀಕ್ಷೆಗಳಿದ್ದು ಈ ಬಗ್ಗೆಯೂ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದೆ.

ಮಳೆ ಹಿನ್ನೆಲೆ ಶುಕ್ರವಾರವೂ ರಜೆ ನೀಡಲಾಗಿದ್ದು ಮಧ್ಯಾಹ್ನದವರೆಗೂ ವರುಣ ಕೊಂಚ ವಿರಮಿಸಿದ್ದ. ಆದರೆ ಮಧ್ಯಾಹ್ನದ ಬಳಿಕ ಮತ್ತೆ ವಿಪರೀತ ಮಳೆಯಾಗುತ್ತಿದ್ದು ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆಯೂ ಇಲ್ಲದಂತಾಗಿದೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.