ಕರಾವಳಿ

ವಾಯುಭಾರ ಕುಸಿತ ಪರಿಣಾಮ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಕಡಲು ಪ್ರಕ್ಷುಬ್ದ

Pinterest LinkedIn Tumblr

ಮಂಗಳೂರು: ಚಂಡಮಾರುತದ ಪರಿಣಾಮವಾಗಿ ಅರಬಿ ಸಮುದ್ರದಲ್ಲಿನ ತೀವ್ರ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಂಗಳೂರಿನ ಹೊರವಲಯದ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಕಡಲು ಪ್ರಕ್ಷುಬ್ದಗೊಂಡಿದೆ.

ಸೊಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಕಡಲ ತಡಿಯ ಜನರು ಆತಂಕಗೊಂಡಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಆದರೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನೀಡಲಾಗಿದ್ದ ರೆಡ್ ಅಲರ್ಟ್‌ನ್ನು ಆರೇಂಜ್ ಅಲರ್ಟ್‌ಗೆ ಮತ್ತು ಶನಿವಾರದಿಂದ ಯೆಲ್ಲೊ ಅಲರ್ಟ್‌ಗೆ ತಗ್ಗಿಸಲಾಗಿದೆ.

Comments are closed.