ಕರಾವಳಿ

ಬಜಾಲ್ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೈಸೂರಿನ ಇಬ್ಬರ ಬಂಧನ

Pinterest LinkedIn Tumblr

ಮಂಗಳೂರು, ನವೆಂಬರ್.02: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಕ್ರಾಸ್ ಬಳಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ಠಾಣಾ ಪೊಲೀಸರು ಹಾಗೂ ರೌಡಿ ನಿಗ್ರಹದಳದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೈಸೂರು ನಿವಾಸಿಗಳಾದ ಶಿವಕುಮಾರ್ @ ಶಿವು (26) ಮತ್ತು ಕುಮಾರ್ ಎಸ್ (23) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 240 ಗ್ರಾಂ ಗಾಂಜಾವನ್ನು ಸ್ವಾದೀನಪಡಿಸಿಳ್ಳಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಟಿ.ಕೋದಂಡರಾಮ್ ರವರ ನೇತೃತ್ವದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಶೋಕ್. ಪಿ., ಪಿ.ಎಸ್.ಐ ಪ್ರದೀಪ್ ಟಿ.ಆರ್, ಠಾಣಾ ಸಿಬ್ಬಂದಿಗಳು ಹಾಗೂ ರೌಡಿ ನಿಗ್ರಹದಳದ ಸಿಬ್ಬಂದಿಯವರು ನಡೆಸಿರುತ್ತಾರೆ.

Comments are closed.