ಕರಾವಳಿ

ಜಯ ಸಿ.ಸುವರ್ಣ ಅವರ ಆರೋಗ್ಯ ವಿಚಾರಿಸಿದ ಪೂಜಾರಿ – ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ

Pinterest LinkedIn Tumblr

ಮಂಗಳೂರು : ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ನಿಕಟಪೂರ್ವ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ಸಂಸ್ಥಾಪಕ ಜಯ ಸಿ. ಸುವರ್ಣ ಅವರನ್ನು ಕೇಂದ್ರದ ಮಾಜಿ ಸಚಿವ ಬಿ‌‌. ಜನಾರ್ದನ ಪೂಜಾರಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಈ ವೇಳೆ ಉದ್ಯಮಿ ಎ.ಜೆ. ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ, ಕಳ್ಳಿಗೆ ತಾರನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಯ ಸಿ. ಸುವರ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಜನಾರ್ದನ ಪೂಜಾರಿ ನೇತ್ರತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

Comments are closed.