ಕರಾವಳಿ

ಮತದಾರ ಬಾಂಧವರಿಗೆ ಹಾಗೂ ಶಾಂತಿಯುತ ಮತದಾನಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಶಾಸಕ ಕಾಮತ್

Pinterest LinkedIn Tumblr

ಮಂಗಳೂರು, ನವೆಂಬರ್.13 : ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರ ಬಾಂಧವರಿಗೆ ಹೃತ್ಪೂರ್ವಕ ಅನಂತಾನಂತ ಧನ್ಯವಾದಗಳನ್ನು ಸಲ್ಲಿಸುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನೆರವೇರಲು ಸಹಕರಿಸಿದ ಚುನಾವಣಾ ಆಯೋಗಕ್ಕೂ, ಸರಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೂ, ಶಾಂತಿಯುತವಾಗಿ ಮತದಾನ ನೆರವೇರಲು ಸಹಕರಿಸಿದ ಆರಕ್ಷಕ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೂ ಧನ್ಯವಾದಗಳು. ಚುನಾವಣೆ ಮತ್ತು ಮತ ಚಲಾಯಿಸಲು ಪ್ರೇರಣೆ ನೀಡಿದ ಮಾಧ್ಯಮ ಮಿತ್ರರಿಗೆ ಧನ್ಯವಾದಗಳು. ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೆ ಶುಭಾಶಯಗಳು ಎಂದು ಶಾಸಕರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.