ಕುಂದಾಪುರ: ಮಿನಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕಿನಲ್ಲಿದ್ದ ಸವಾರ ಹಾಗೂ ಸಹ ಸವಾರ ಇಬ್ಬರೂ ಕೂಡ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಬೈಕ್ ಸವಾರರಾದ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಶಾದಾಬ್ ಹಾಗೂ ಬೈಂದೂರಿನ ಅಬ್ದುಲ್ ರಹೀಮ್ ಮೃತ ದುರ್ದೈವಿಗಳು.
ಘಟನೆ ವಿವರ: ಶುಭ ಸಮಾರಂಭವೊಂದಕ್ಕೆ ತೆರಳಿ ಬೈಂದೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಮಿನಿ ಬಸ್ ಹಾಗೂ ಕುಂದಾಪುರ ಕಡೆಯಿಂದ ಗಂಗೊಳ್ಳಿ ಕಡೆಗೆ ಸಾಗುತ್ತಿದ್ದ ಬೈಕಿನ ನಡುವೆ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಅಪಘಾತ ಸಂಭವಿಸಿದ್ದು ಮಿನಿ ಬಸ್ ಕೆಳಭಾಗದಲ್ಲಿ ಬಿದ್ದ ಬೈಕ್ ಸವಾರರಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದು ಅವರನ್ನು ತಕ್ಷಣವೇ ಅಂಬುಲೆನ್ಸ್ ವಾಹನದಲ್ಲಿ ಚಿಕಿತ್ಸೆಗಾಗಿ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Comments are closed.