ಕರಾವಳಿ

ಕೇಬಲ್ ಟಿವಿ ಸೇವೆ : ಸಾರ್ವಜನಿಕರಿಂದ ದೂರು ಸ್ವೀಕಾರ – ಡಿ.5 ಕೊನೆ ದಿನ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು : ಜಿಲ್ಲೆಯಲ್ಲಿ ಕೇಬಲ್ ಟೆಲಿವಿಷನ್ ಚಾನಲ್‍ಗಳು ಪ್ರಸಾರ ಮಾಡುತ್ತಿರುವ ಕಾರ್ಯಕ್ರಮಗಳು ಹಾಗೂ ಜಾಹೀರಾತುಗಳಿಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ, ಸಾರ್ವಜನಿಕರು ತಮ್ಮ ದೂರನ್ನು ಡಿಸೆಂಬರ್ 5ರೊಳಗೆ ಜಿಲ್ಲಾ ಕೇಬಲ್ ಟಿ.ವಿ. ಮೇಲ್ವಿಚಾರಣಾ ಸಮಿತಿಗೆ ಕಳುಹಿಸಬಹುದು.

ಸದರಿ ದೂರು ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿಸೆಂಬರ್ 7 ರಂದು ನಡೆಯುವ ಜಿಲ್ಲಾ ಮಟ್ಟದ ಕೇಬಲ್ ಟಿ.ವಿ. ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಕ್ರಮವಹಿಸಲಾಗುವುದು.

ದೂರುಗಳನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಇಲಾಖೆ, ಪಿಡಬ್ಲ್ಯುಡಿ ಕಟ್ಟಡ, ನೆಹರೂ ಮೈದಾನ ಎದುರು, ಮಂಗಳೂರು ಇಲ್ಲಿಗೆ ಕಳುಹಿಸಬಹುದು ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುವ ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.