ಕರಾವಳಿ

ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಬೇಸತ್ತು ಉದ್ಯಮಿ ಆತ್ಮಹತ್ಯೆಗೆ ಶರಣು

Pinterest LinkedIn Tumblr

ಉಡುಪಿ: ವ್ಯವಹಾರದಲ್ಲಿ ಸಂಭವಿಸಿದ ಆರ್ಥಿಕ ಸಂಕಷ್ಟದಿಂದ ಬೇಸತ್ತು ಯುವ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯ ಚಿಟ್ಪಾಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಬೀಡಿನಗುಡ್ಡೆಯ ಹಂಸರಾಜ್ ನಾಯಕ್(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಪೈಂಟ್ ಫ್ಯಾಕ್ಟರಿಯ ಪಾಲುದಾರರಾಗಿದ್ದು, ಇದರಲ್ಲಿ ಉಂಟಾದ ಆರ್ಥಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.