ಕರಾವಳಿ

ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಡಿಸೆಂಬರ್ 24 : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 25/12/2019ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಡಿಸೆಂಬರ್ 25 ರಂದು ಬೆಳಿಗ್ಗೆ 10.15 ಗಂಟೆಗೆ ಮಂಗಳೂರು ವಿಮಾನಕ್ಕೆ ಆಗಮಿಸಿ, 11.45 ಗಂಟೆಗೆ ಒಂಟಿಕಟ್ಟೆ, ಮೂಡಬಿದ್ರೆ ತಾಲೂಕಿನಲ್ಲಿ ನಡೆಯುವ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಕಂಬಳ ಉತ್ಸವಕ್ಕೆ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಉಡುಪಿ ಜಿಲ್ಲೆಗೆ ತೆರಳುವ ಮುಖ್ಯಮಂತ್ರಿಗಳು, ಸಂಜೆ 6.15 ಗಂಟೆಗೆ ಬಂಗ್ರ ಕೂಳೂರು, ಗೋಲ್ಡ್ ಫಿಂಚ್ ಸಿಟಿ ಮಂಗಳೂರಿನಲ್ಲಿ ನಡೆಯುವ ಪ್ರಕಾಶಾಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7.30 ಗಂಟೆಗೆ ವಿಮಾನದ ಮೂಲಕ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.