ಕರಾವಳಿ

ಮಂಗಳೂರಿನ ಬೋಳೂರು ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನವಗ್ರಹ ಶಾಂತಿ ಹೋಮ

Pinterest LinkedIn Tumblr

ಮಂಗಳೂರು, ಡಿಸೆಂಬರ್.26: ಮಂಗಳೂರಿನ ಬೋಳೂರು ಸುಲ್ತಾನ್ ಬತ್ತೇರಿ ರಸ್ತೆಯಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ದಿನಾಂಕ 25/12/2019 ರಂದು ನವಗ್ರಹ ಶಾಂತಿ ಹೋಮ ಜರುಗಿತು.

ಗ್ರಹಗಳ ಸ್ಥಾನಾಂತರ ಹಾಗೂ ಸೂರ್ಯ ಗ್ರಹಣದ ಪ್ರಯುಕ್ತ ಹಮ್ಮಿಕೊಂಡ ಈ ಹೋಮವನ್ನು ಮಠಾಧಿಪತಿ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯರ ದಿವ್ಯ ಉಪಸ್ಥಿತಿಯಲ್ಲಿ ಆಶ್ರಮದ ತಾಂತ್ರಿಕ ವಿಧಿ ವಿಧಾನಗಳಂತೆ ಬ್ರಹ್ಮಚಾರಿ ರತೀಶ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಅಮ್ಮನವರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಲೋಕ ಕಲ್ಯಾಣಾರ್ಥವಾಗಿ ನೆರೆದಿದ್ದ ಭಕ್ತರೆಲ್ಲರೂ ಸಾಮೂಹಿಕವಾಗಿ ಪ್ರಾರ್ಥಿಸಿದರು. ಪೂರ್ಣಾಹುತಿಯ ನಂತರ ಪ್ರಸಾದ ವಿತರಣೆ ಮಾಡಲಾಯಿತು.

Comments are closed.