ಕರಾವಳಿ

ಮಂಗಳೂರು ಗೋಲೀಬಾರ್ : ಉಡುಪಿ ಜಿಲ್ಲಾಧಿಕಾರಿಗಳಿಂದ ತನಿಖೆ ಆರಂಭ

Pinterest LinkedIn Tumblr

ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿಸಿ ವಿರೋಧಿಸಿ ನಗರದಲ್ಲಿ ಡಿ.19ರಂದು ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರ ಸಂದರ್ಭ ನಡೆದ ಗೋಲಿಬಾರ್ ಸಂಬಂಧ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಆರಂಭಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಅವರು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿ ಬಳಿಕ ಸ್ಟೇಟ್ ಬ್ಯಾಂಕ್ ಪರಿಸರ, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆ ಗೆ ಭೇಟಿ ನೀಡಿ ಪರಿಶೀಲಿಸಿದರು.

Comments are closed.