ಕರಾವಳಿ

ವಿಶ್ವಬ್ರಾಹ್ಮಣ ಸಮಾಜಕ್ಕೂ ಶ್ರೀ ಕೃಷ್ಣ ಮಠಕ್ಕೆ ಅವಿನಾಭಾವ ಸಂಬಂಧ ; ಶ್ರೀ ಅದಮಾರು ಸ್ವಾಮೀಜಿ

Pinterest LinkedIn Tumblr

ಮಂಗಳೂರು : ಉಡುಪಿಯ ಪರ್ಯಾಯ ಪೀಠ ಏರಲಿರುವ ಶ್ರೀ ಅದಮಾರು ಮಠದ ಸ್ವಾಮೀಜಿಯವರು ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಪರ್ಯಾಯ ಮಹೋತ್ಸವದ ಆಮಂತ್ರಣ ನೀಡಿ ವಿಶ್ವಬ್ರಾಹ್ಮಣ ಸಮಾಜಕ್ಕೂ ಶ್ರೀ ಕೃಷ್ಣ ಮಠಕ್ಕೆ ಅವಿನಾಭಾವ ಸಂಬಂಧವಿದೆ ಪರ್ಯಾಯ ಮಹೋತ್ಸವಕ್ಕೆ ಎಲ್ಲರ ಸಹಕಾರದೊಂದಿಗೆ ನಡೆಯಲೆಂದು ಹೇಳಿದರು.

ಕ್ಷೇತ್ರದ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ, 2ನೇ ಮೊಕ್ತೇಸರ ಎಂ. ಸುಂದರ್ ಆಚಾರ್ಯ ಬೆಳುವಾಯಿ, ಮೂರನೇ ಮೊಕ್ತೇಸರ ಎ. ಲೋಕೇಶ್ ಆಚಾರ್ಯ ಬಿಜೈ ಹಾಗೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Comments are closed.