ಕರಾವಳಿ

ಎಂಪಿ ಎಂಎಲ್ಎ ನ್ಯೂಸ್‌ನ 11ನೇ ಸೌಹಾರ್ದ ಸಂಗಮ ಸಹಬಾಳ್ವೆಯ ಸಂದೇಶ ಸಾರಲಿ ; ಹರಿಕೃಷ್ಣ ಪುನರೂರು

Pinterest LinkedIn Tumblr

ಮಂಗಳೂರು : ನಾವೆಲ್ಲರೂ ಜಾತ್ಯಾತೀತವಾಗಿ ಬದುಕಬೇಕು ಸೌಹಾರ್ದತೆ ಎನ್ನುವುದು ನಮ್ಮ ಉಸಿರಾಗಿ ಇಡೀ ಭಾರತ ದೇಶ ಹಸಿರಾಗಿ ಪ್ರಜ್ವಲಿಸಬೇಕು, ಶಾಂತಿ, ಸರ್ವ ಧರ್ಮಗಳ ತವರೂರಾಗಿ ನಲಿದಾಡ ಬೇಕು. ನಾಡು ನುಡಿ ಸಂಸ್ಕೃತಿಗೆ ಒತ್ತು ನೀಡಿದ ಸಾಧಕರನ್ನು ಗುರುತಿಸಿ, ಸೌಹಾರ್ದವಾಗಿ ಸಾಗುವ ಸೌಹಾರ್ದ ಸಂಗಮವು ಎಲ್ಲರಿಗೂ ಮಾದರಿಯಾಗಿ ಸಹಬಾಳ್ವೆಯ ಸಂದೇಶ ಸಾರಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರಿನ ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.

ಅವರು ಮಂಗಳೂರು ಪುರಭವನದಲ್ಲಿ ನಡೆದ ಎಂಪಿ ಎಂಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು (ಸೌಹಾರ್ದ ಪ್ರಶಸ್ತಿ) , ಡಾ| ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಮತ್ತು ಗೌತಮ್ ಶೆಟ್ಟಿ (ಸಮಾಜರತ್ನ), ಸುಧೀರ್ ಶೆಟ್ಟಿ ಕಣ್ಣೂರು (ಉತ್ತಮ ಜನ ಪ್ರತಿನಿಧಿ), ಡಾ. ಡಿ. ಶಿವಾನಂದ ಪೈ ಮತ್ತು ಡಾ. ಸದಾನಂದ ಪೂಜಾರಿ (ಬೆಸ್ಟ್ ಡಾಕ್ಟರ‍್ಸ್ ಅವಾರ್ಡ್), ಪಿ. ಜಯರಾಮ ರೈ (ಬೆಸ್ಟ್ ಲಾಯರ‍್ಸ್ ಅವಾರ್ಡ್), ಜಗನ್ನಾಥ್ ಶೆಟ್ಟಿ ಬಾಳ (ಮೀಡಿಯಾ ಅವಾರ್ಡ್) , ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ (ಕ್ರೀಡಾ ವರದಿಗಾರ ರಾಜ್ಯ ಪ್ರಶಸ್ತಿ) ಎನ್. ಕೃಷ್ಣಾನಂದ (ಉತ್ತಮ ಅಧಿಕಾರಿ ಪ್ರಶಸ್ತಿ), ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್, ಡಾ. ರಾಜೇಶ್ ಕದ್ರಿ ಮತ್ತು ಪ್ರದೀಪ್ ಕುಮಾರ್ ಶೆಟ್ಟಿ (ಸಾಧನಶ್ರೀ ಪ್ರಶಸ್ತಿ), ದಿನೇಶ್ ಅತ್ತಾವರ (ರಂಗಭೂಮಿ ಅವಾರ್ಡ್), ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ (ಯುವರತ್ನ), ಜೇಸಿ ಕೆ.ಎಸ್. ಸುಧೀರ್‌ಕೃಷ್ಣ ಪಾಲ್ತಾಡಿ ಮತ್ತು, ಯು.ಆರ್. ಶೆಟ್ಟಿ (ಯುವ ಪುರಸ್ಕಾರ), ಶಿವಾನಂದ ಕರ್ಕೇರ, ನರಸಿಂಹ ಹೆಗ್ಡೆ, ಪದ್ಮನಾಭ ನರಿಂಗಾನ, ವಿದ್ಯಾಧರ ಶೆಟ್ಟಿ, ಇಂದುಶೇಖರ್ ಎಸ್, ಶ್ರೀಮತಿ ಅಶ್ವಿನಿ ಅರಳ ಮತ್ತು ಕೇಶವ ಶಾಂತಿ (ಸಾರ್ವಜನಿಕ ಸನ್ಮಾನ) , ಅಬ್ದುಲ್ ರವೂಫ್, ಅನಿಲ್ ಕುಮಾರ್, ಅಬ್ದುಲ್ ರಹಿಮಾನ್, ಪಕೀರಪ್ಪ ಮರೋಡಿ, ಶಿವಪ್ರಕಾಶ್ ಪೂಂಜ ಹರೇಕಳ, ಇಸ್ಮಾಯಿಲ್ ಮೂಡುಶೆಡ್ಡೆ, ಬಿ. ಶೇಷಪ್ಪ ಬಂಬಿಲ, ಹೊನ್ನಯ್ಯ ಕಾಟಿಪಳ್ಳ, ಶರತ್ ಶೆಟ್ಟಿ ಕಿನ್ನಿಗೋಳಿ, ರಂಜಿತ್ ಶೆಟ್ಟಿ ಕಾವೂರು, ಸೂರಜ್ ಸಾಗರ್ ಕುಂಪಲ, ರಾಜೇಶ್ ಅಮೀನ್, ಶ್ರೀಮತಿ ಜ್ಯೋತಿ ಜೈನ್, ಹರೀಶ್, ಮಂಜುನಾಥ್, ಉದಯ ಮಂಜನಾಡಿ (ಸೌಹಾರ್ದ ಪುರಸ್ಕಾರ) ಸೇರಿದಂತೆ 40 ಮಂದಿ ಸಾಧಕರನ್ನು ಗೌರವಿಸಲಾಯಿತು.

Comments are closed.