ಕರಾವಳಿ

ಫಿನೀಕ್ಸ್ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಮೂರ್ಜೆ ಸುನಿತಾ ಪ್ರಭು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ

Pinterest LinkedIn Tumblr

ಮಂಗಳೂರು : ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ

ಪ್ರತಿಭಾನ್ವಿತೆಯಾಗಿರುವ ಈಕೆ 2019 ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ.

ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ.

ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ ಜನವರಿ 22ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ .

ಜೊತೆಗೆ ಜನವರಿ 26ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .

Comments are closed.