ಕರಾವಳಿ

71ನೇ ಗಣರಾಜ್ಯೋತ್ಸವ : ದ.ಕ.ಜಿಲ್ಲೆಯಲ್ಲಿ ಪೂಜಾರಿಯವರಿಂದ ಧ್ವಜಾರೋಹಣ – ಮನ ಸೆಳೆದ ಪಥಸಂಚಲನ

Pinterest LinkedIn Tumblr

ಮಂಗಳೂರು, ಜನವರಿ.26 71ನೇ ಗಣರಾಜ್ಯೋತ್ಸವ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ರವಿವಾರ 26-01-2020 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಜರಗಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಸ ಪೂಜಾರಿ ಧ್ವಜಾರೋಹಣಗೈದು ಗಣರಾಜ್ಯೋತ್ಸವ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌, ಐಜಿಪಿ ಜೆ ಅರುಣ್‌ ಚಕ್ರವರ್ತಿ, ಶಾಸಕರಾದ ವೇದವ್ಯಾಸ್‌ ಕಾಮತ್‌, ಡಾ.ಭರತ್‌ ಶೆಟ್ಟಿ, ಯು.ಟಿ. ಖಾದರ್‌, ಎಂಎಲ್‌ಸಿಗಳಾದ ಭೋಜೆಗೌಡ, ಕಸಾಪ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯನಾಂದ ಕತ್ತಲ್‌ಸಾರ್‌ ಹಾಗೂ ವಿವಿಧ ಆಕಾಡೆಮಿಗಳ ಅಧ್ಯಕ್ಷರು ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ವಿವಿಧ ಸಾಧಕರಿಗೆ ಸಮ್ಮಾನ : ಮನ ಸೆಳೆದ ಪಥಸಂಚಲನ

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾದ ಹರೇಕಳ ಹಾಜಬ್ಬ ಸೇರಿದಂತೆ ಮತ್ತಿತ್ತರ ಸಾಧಕರನ್ನು ಸನ್ಮಾನಿಸಲಾಯಿತು. ಗಣರಾಜ್ಯೋತ್ಸವ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ನಡೆದ ಪಥಸಂಚಲನದಲ್ಲಿ ವಿದ್ಯಾರ್ಥಿಗಳು, ಎನ್‌ಸಿಸಿ ತಂಡ, ಪೊಲೀಸ್‌ ಸಿಬ್ಬಂದಿಗಳು ಭಾಗವಹಿಸಿದ್ದರು. ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಪಥಸಂಚಲನ ನೆರೆದವರ ಕಣ್ಮನ ಸೆಳೆಯಿತು.

Comments are closed.