ಕರಾವಳಿ

ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಿಂದ ವೀರ ವೆಂಕಟೇಶ ದೇವರಿಗೆ ವಿಶೇಷ ಅಭಿಷೇಕ

Pinterest LinkedIn Tumblr

ಮಂಗಳೂರು :  ಮಂಗಳೂರು ರಥೋತ್ಸವ ಪ್ರಯುಕ್ತ ವೀರ ವೆಂಕಟೇಶ ದೇವರಿಗೆ ವಿಶೇಷ ಅಭಿಷೇಕ ಕಾಶೀ ಮಠಾಧೀಶರಿಂದ ಜರಗಿತು.

ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಮಂಗಳೂರು ಇದರ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಶನಿವಾರ ಶ್ರೀ ದೇವರಿಗೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶತ ಕಲಶಾಭಿಷೇಕ, ಗಂಗಾಭಿಷೇಕ, ಪವಮಾನಾಭಿಷೇಕ, ಕನಕಾಭಿಷೇಕಗಳು ನೆರವೇರಿದವು.

ಬ್ರಹ್ಮ ರಥೋತ್ಸವ ಪ್ರಯುಕ್ತ ಪ್ರಾತಃ ಕಾಲದಲ್ಲಿ ವಿಶೇಷ ಮಹಾ ಪ್ರಾರ್ಥನೆ ನಡೆದು ಬಳಿಕ ಶ್ರೀ ದೇವಳದ ಅರ್ಚಕರಿಂದ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು. ತದನಂತರ ಶ್ರೀದೇವರು ಯಜ್ಞಕ್ಕೆ ಛಿತೈಸಿ , ಯಜ್ಞ ಮಂಟಪದಲ್ಲಿ ಶ್ರೀಗಳವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಹಾ ಪೂರ್ಣ ಆಹುತಿ ನೆರವೇರಿತು .

ಚಿತ್ರ : ಮಂಜು ನೀರೇಶ್ವಾಲ್ಯ

Comments are closed.