ಕರಾವಳಿ

ಮುಂಬಯಿಯಿಂದ ಮಂಗಳೂರಿಗೆ ನೆಮಕ್ಕೆ ಬಂದಿದ್ದ ತಂದೆ ಮಗ ನಾಪತ್ತೆ : ನೇತ್ರಾವತಿ ಸೇತುವೆ ಬಳಿ ಕಾರು ಪತ್ತೆ – ಆತ್ಮಹತ್ಯೆ ಶಂಕೆ?

Pinterest LinkedIn Tumblr

ಮಂಗಳೂರು, ಫೆಬ್ರವರಿ.16 : ಮುಂಬಯಿಯಿಂದ ನೇಮೋತ್ಸವಕ್ಕೆ ಮಂಗಳೂರಿಗೆ ಬಂದಿದ್ದ ಕುಟುಂಬದ ಇಬ್ಬರು ಸದಸ್ಯರು (ಬಾಲಕ ಸೇರಿ) ನಗರದ ಹೊರವಲಯದ ಉಳ್ಳಾಲ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಬಳಿ ಭಾನುವಾರ ಮುಂಜಾನೆ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಇವರು ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದೆ.

ನಾಪತ್ತೆಯಾದವರನ್ನು ಬಂಟ್ವಾಳ , ಬಾಳ್ತಿಲ ಶಂಭೂರು ಚರ್ಚ್ ಬಳಿಯ ನಿವಾಸಿ ಗೋಪಾಲಕೃಷ್ಣ ರೈ(45), ಹಾಗೂ ಅವರ ಪುತ್ರ ಅನೀಶ್ ರೈ(6) ಎಂದು ಗುರುತಿಸಲಾಗಿದೆ.

ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ಗೋಪಾಲಕೃಷ್ಣ.ರೈ ಕುಟಂಬದವರು ಕಳೆದ ಎರಡು ದಿನಗಳ ಹಿಂದೆ ಮುಂಬಯಿ ಯಿಂದ ಕೊಣಾಜೆಯ ಪಾವುರಿಗೆ ಸಂಬಧಿಕರ ಮನೆಗೆ ನೇಮಕ್ಕೆ ಬಂದಿದ್ದರು. ನಿನ್ನೆ ರಾತ್ರಿ ಎಲ್ಲರು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಭಾನುವಾರ ನಸುಕಿನ ಜಾವ 4.30 ರ ವೇಳೆ ಮಗ ಅನೀಶ್ ರೈ ರೊಂದಿಗೆ ಗೋಪಾಕೃಷ್ಣ ರೈ ಅವರು ಕಾರು ಚಲಾಯಿಸಿ ಮನೆಯಿಂದ ಹೊರಗೆ ಹೊರಟಿದ್ದರು ಎನ್ನಲಾಗಿದ್ದು, ಈ ಕಾರು ಭಾನುವಾರ ಬೆಳಗ್ಗಿನ ಜಾವ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಪತ್ತೆಯಾಗಿದೆ.
ಉಳ್ಳಾಲ ನೇತ್ರವಾತಿ ಸೇತುವೆಯಲ್ಲಿ ಕಾರು ನಿಂತಿದ್ದು ವಾಹನದಲ್ಲಿ ಯಾರು ಇಲ್ಲದ್ದು ನೋಡಿ ಸಾರ್ವಜನಿಕರು ಮಂಗಳೂರು ನಗರ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

‘ತನಗೆ ಒಂದು ವಾರದಿಂದ ನಿದ್ರೆ ಬರುತ್ತಿಲ್ಲ. ನಾನೊಬ್ಬ ಮಗನನ್ನು ಕೊಲ್ಲುವ ಮಹಾ ಪಾಪಿ. ಇದಕ್ಕಾಗಿ ನನ್ನ ಕ್ಷಮಿಸಿರಿ..ಪತ್ನಿ ಅಶ್ವಿನಿ ರೈ ನಿನ್ನ ಬಿಟ್ಟು ಇಬ್ಬರೂ ದೂರ ಹೋಗುತ್ತಿರುವುದಾಗಿ’ ಡೆತ್ ನೋಟ್ ಬರೆದಿಟ್ಟು ಕೃತ್ಯ ಎಸಗಿದ್ದಾರೆ.ಎನ್ನಲಾಗಿದೆ.

ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಇಬ್ಬರ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

Comments are closed.