ಕರಾವಳಿ

ಇನ್ನೊಂದು ದೇವಸ್ಥಾನ ಕಳವಾದರೂ ಉಪವಾಸ ಕೂರುವೆ: ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ

Pinterest LinkedIn Tumblr

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿರುವ ದೇವಸ್ಥಾನಗಳಲ್ಲಿ ಕಳೆದ ಒಂದು ವಾರದಲ್ಲಿ ಮೂರ್ನಾಲ್ಕು‌ ಕಳ್ಳತನ ನಡೆದಿದ್ದು ಇದನ್ನು ಸಹಿಸುವುದಿಲ್ಲ. ಇನ್ನು ಒಂದು ದೇವಸ್ಥಾನ ಕಳವಾದರೂ ಕೂಡ ದೇವಸ್ಥಾನದಲ್ಲಿ ಅಮರಣಾಂತ ಉಪವಾಸ ನಡೆಸುತ್ತೆನೆ ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಾವುಂದ ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಕಳವು ನಡೆದಿದ್ದು ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ದೇವಸ್ಥಾನಗಳು ಶೃದ್ಧಾಭಕ್ತಿಯ ಕೇಂದ್ರವಾಗಿದ್ದು ಇಂತಹ ಕಳ್ಳತನ ಮೊದಲಾದ ಕೃತ್ಯ ನಡೆದಾಗ ಜನರಲ್ಲಿ ಧಾರ್ಮಿಕ ಪ್ರಜ್ಞೆ ಕಡಿಮೆಯಾಗುತ್ತದೆ. ಸರಣಿ ಕಳ್ಳತನ ಪ್ರಕರಣದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಪೊಲೀಸರು ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ದೇವಸ್ಥಾನಗಳು ಇರುವ ಪ್ರದೇಶಗಳಲ್ಲಿ ಗಸ್ತು ವ್ಯವಸ್ಥೆ ಹೆಚ್ಚಿಸಬೇಕು ಎಂದು ಸುಕುಮಾರ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಹಿಂದಿನ ಕಳ್ಳತನ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂದರು.

ಇದನ್ನೂ ಓದಿರಿ-

ಬೈಂದೂರು: ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಳಕ್ಕೆ ಕನ್ನ-10 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಕಳವು

Comments are closed.