ಕರಾವಳಿ

ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ ಅವರು ನಾಳೆ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು ಫೆಬ್ರವರಿ 27 : ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ ಇವರು ನಾಳೆ ದಿನಾಂಕ 28ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಫೆಬ್ರವರಿ 28 ರಂದು ಮಧ್ಯಾಹ್ನ 2.20 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 2.45 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.45 ಗಂಟೆಗೆ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥೇಶ್ವರ ಸ್ವಾಮಿ ದರ್ಶನ ಪಡೆದು ರಾತ್ರಿ 9.45 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ.

ಫೆಬ್ರವರಿ 29 ರಂದು ಬೆಳಗ್ಗೆ 9 ಗಂಟೆಗೆ ಸಾರ್ವಜನಿಕ ಭೇಟಿ, 10 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ಅಧಿಕಾರಿ ಗಳೊಂದಿಗೆ ಚರ್ಚೆ ಹಾಗೂ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3.30 ಗಂಟೆಗೆ ಒಡ್ಡೂರು ಧರ್ಮಚಾವಡಿಯಲ್ಲಿನ ಶತಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.40 ಗಂಟೆಗೆ ವಿಮಾನದ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳುವರು.

Comments are closed.