ಮಂಗಳೂರು ಮಾರ್ಚ್ 12; ಪ್ರಪಂಚದಾದ್ಯಂತ ಕರೋನಾ ವೈರಸ್ ವ್ಯಾಪಕವಾಗಿ ಪಸರಿಸುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ಆರೋಗ್ಯ ತುರ್ತುಪರಿಸ್ಥಿತಿಯನ್ನು ಘೋಷಿಸಿದೆ.
ನಮ್ಮ ದೇಶದಲ್ಲಿಯೂ ಅದರ ಕರಾಳ ಛಾಯೆ ಮೂಡುತ್ತಿರುವುದರಿಂದ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಇದರ ಘಟಕಗಳ (ಮಂಗಳೂರು ಡೇರಿ, ಉಡುಪಿ ಡೇರಿ, ಮಣಿಪಾಲ ಶೀತಲೀಕರಣ ಕೇಂದ್ರ ಹಾಗೂ ಪುತ್ತೂರು ಶೀತಲೀಕರಣ ಕೇಂದ್ರ ಸಂದರ್ಶನವನ್ನು ಮುಂಜಾಗರೂಕತಾ ಕ್ರಮವಾಗಿ ತಾತ್ಕಾಲಿಕ ನೆಲೆಯಲ್ಲಿ ಅನಿರ್ದಿಷ್ಟಾವಧಿವರೆಗೆ ನಿರ್ಬಂಧಿಸಲಾಗಿದೆ.
ಮಾರ್ಚ್ 11 ರಂದು ಒಕ್ಕೂಟದ ಎಲ್ಲಾ ಸಿಬ್ಬಂದಿಗಳಿಗೆ ಕರೋನಾ ನಿಯಂತ್ರಣ/ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಒಕ್ಕೂಟದ ಡೇರಿ ಘಟಕಗಳ ವೀಕ್ಷಣೆಗೆ ಭೇಟಿ ನೀಡುವುದನ್ನು ಮುಂದೂಡಿ ಸಹಕರಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.
Comments are closed.