ಅಂತರಾಷ್ಟ್ರೀಯ

ಕೊರೊನ ಎಫೆಕ್ಟ್ : ಬಹುನಿರೀಕ್ಷಿತ “ಇಂಗ್ಲಿಷ್” ತುಳು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

Pinterest LinkedIn Tumblr

ಕೋಸ್ಟಲ್‌ವುಡ್‌‌ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ “ಇಂಗ್ಲಿಷ್” ತುಳು ಸಿನಿಮಾ ಶೀಘ್ರದಲ್ಲೇ ಬಿಡುಗಡೆ

ಮಂಗಳೂರು, ಮಾರ್ಚ್.17: ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿಅವರು, ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಮಾಲ್ ಹಾಗೂ ಚಿತ್ರಮಂದಿರಗಳನ್ನು ತಾತ್ಕಾಲಿಕ ಬಂದ್ ಮಾಡುವಂತೆ ಆದೇಶ ನೀಡಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ಬಿಡುಗಡೆಯಾಗ ಬೇಕಾಗಿದ್ದಇಂಗ್ಲಿಷ್” ತುಳು ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ನಮ್ಮ ನಿರ್ಮಾಪರಾದ ಶ್ರೀ ಹರೀಶ್ ಶೇರಿಗಾರ್ ಅವರ ಇಚ್ಚೆಯಂತೆ ಚಿತ್ರಮಂದಿರದ ವಿಚಾರದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡು ಚಿತ್ರ ಬಿಡುಗಡೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದರು.

“ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾದ ವರ್ಲ್ಡ್ ಪ್ರಿಮಿಯರ್ ಶೋ ಇತ್ತೀಚಿಗೆ ದುಬೈಯಲ್ಲಿ ನಡೆದಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ನೋಡಿದ ಪ್ರತಿಯೊಬ್ಬರು ಚಿತ್ರವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿ ಬಂದಿದ್ದು, ಚಿತ್ರ ಬಿಡುಗಡೆಯ ಬಳಿಕ ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಿಸಿ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸೂರಜ್ ಶೆಟ್ಟಿ ಹೇಳಿದರು.

ನಟ ನವೀನ್ ಪಡೀಲ್ ಮಾತನಾಡಿ, ಕೊರೊನ ಬಗ್ಗೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶ ಬಂದಿದ್ದು, ಇದಕ್ಕೆ ನಾವೆಲ್ಲಾ ಸಹಕಾರ ನೀಡಬೇಕಾದದ್ದು ಅನಿವಾರ್ಯ, ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರದ ಆದೇಶಕ್ಕೆ ಗೌರವ ನೀಡಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡುವಂತೆ ಹಾಗೂ ಮುಂದೂಡಿರುವ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ನಮ್ಮ ನಿರ್ಮಾಪಕರಾದ ಶ್ರೀ ಹರೀಶ್ ಶೇರಿಗಾರ್ ಅವರು ನಮಗೆ ಸೂಚನೆ ನೀಡಿರುತ್ತಾರೆ. ಅವರ ಸೂಚನೆಯಂತೆ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೆ ತಿಳಿಸುತ್ತೇವೆ ಎಂದು ಹೇಳಿದರು.

ಈಗಿನ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡಿದರೆ ಸಿನಿಮಾದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ. ಮುಂದೆ ಎಲ್ಲವೂ ಸರಿಯಾದ ಮೇಲೆ ಆರೋಗ್ಯಕರ ವಾತಾವರಣದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂದು ನಟ ವಿಸ್ಮಯ್ ವಿನಾಯಕ್ ತಿಳಿಸಿದರು.

ಶ್ರೀ ಹರೀಶ್ ಶೇರಿಗಾರ್ ಅವರ ಸಹೋದರ ಶ್ರೀನಿವಾಸ್ ಶೇರಿಗಾರ್ ಅವರು ಮಾತನಾಡಿ, ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಜೊತೆ ಕೈಜೋಡಿಸಿಕೊಂಡು ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಧ್ಯಮದವರು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶ್ರೀ ಹರೀಶ್ ಶೇರಿಗಾರ್ ಯಾವೂದೇ ಚಿತ್ರ ನಿರ್ಮಿಸುವಾಗಲೂ ಅ ಚಿತ್ರದಲ್ಲಿ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡುತ್ತಾರೆ. ಸಮಾಜ ಮೇಲಿನ ಕಾಳಾಜಿಯಿಂದ ಅವರು ತಮ್ಮ ಚಿತ್ರದ ಮೂಲಕ ಸಮಾಜಕ್ಕೆ ಸಂದೇಶ ನೀಡುವ ಪ್ರಯತ್ನವನ್ನು ಮಾಡುತ್ತಾರೆ. ಇಂಗ್ಲೀಷ್ ಚಿತ್ರ ಕೂಡ ಇದೇ ರೀತಿ ಒಂದು ಉತ್ತಮ ಸಂದೇಶವನ್ನು ಹೊತ್ತು ತಂದಿದೆ. ಚಿತ್ರ ಅತ್ಯೂತ್ತಮವಾಗಿ ಮೂಡಿ ಬಂದಿದೆ.

ಈಗಾಗಲೇ ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಾಣದಲ್ಲಿ ತಯಾರಾಗಿರುವ ಮಾರ್ಚ್ 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳಿಗೆ ಮಾಧ್ಯಮ ಮಿತ್ರರು ಬಹಳಷ್ಟು ಸಲಹೆ, ಸಹಕಾರ ನೀಡಿದ್ದಿರಿ. ಅದೇ ರೀತಿ ಈ ಚಿತ್ರಕ್ಕೂ ಹೆಚ್ಚಿನ ಪ್ರಚಾರ ನೀಡುವ ಮೂಲಕ ತಾವೆಲ್ಲಾ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಶ್ರೀ ಹರೀಶ್ ಶೇರಿಗಾರ್ ಅವರ ಹಿರಿಯ ಸಹೋದರ ಶ್ರೀ ಪ್ರಕಾಶ್ ಶೇರಿಗಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತ ರಿದ್ದರು.

ವರದಿ ಹಾಗೂ ಚಿತ್ರ ; ಸತೀಶ್ ಕಾಪಿಕಾಡ್

Comments are closed.