ಕರಾವಳಿ

ನಾಳೆಯಿಂದ ಅಗತ್ಯ ವಸ್ತುಗಳು ಮನೆ ಬಾಗಿಲಿಗೆ -ಜನರು ರಸ್ತೆಗೆ ಕಾಲಿಡುವಂತಿಲ್ಲ : ಸಂಸದ ಕಟೀಲ್ ಎಚ್ಚರಿಕೆ

Pinterest LinkedIn Tumblr

ಮಂಗಳೂರು, ಮಾರ್ಚ್.25 : ನಾಳೆಯಿಂದ ಜನರು ರಸ್ತೆಗೆ ಕಾಲಿಡುವಂತಿಲ್ಲ. ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸಾರ್ವಜನಿಕರು ಅಗತ್ಯ ವಸ್ತುಗಳಿಗೆ ಗುಂಪು ಗುಂಪುಗಳಾಗಿ ಮಾರುಕಟ್ಟೆಗಳಿಗೆ ಮುಗಿಬೀಳುತ್ತಿರುವ ಬಗ್ಗೆ ತಿಳಿದುಬಂದಿದೆ. ಜಿಲ್ಲಾಡಳಿತ ಕಳೆದ ಕೆಲವು ದಿನಗಳಿಂದ ಅಗತ್ಯ ವಸ್ತು ಖರೀದಿಗೆ ಸಮಯ ಕೊಟ್ಟಿದೆ. ಆದರೆ ನಾಳೆಯಿಂದ ನಗರದಲ್ಲಿ ಇದಕ್ಕೂ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ಜನ ಹೊರಗಡಿಯಿಡುವಂತಿಲ್ಲ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಬಹುದು, ಆದರೆ ಹಲವೆಡೆ ಮಾರ್ಕೆಟ್ , ಅಗತ್ಯ ವಸ್ತುಗಳ ಖರೀದಿಗೆ ಜನ ಒಮ್ಮೆಲೆ ಮುಗಿಬೀಳುತ್ತಿದ್ದಾರೆ. ವರ್ತಕರು ಗ್ರಾಹಕರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ವ್ಯಾಪಾರ ವಹಿವಾಟು ಮಾಡುವ ಬಗ್ಗೆ ತಿಳಿದುಬಂದಿದ್ದು ಹೀಗಾಗಿ ನಾಳೆ ಎಲ್ಲವನ್ನು ಬಂದ್ ಮಾಡಲಾಗುವುದು.

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಕಟ್ಟು ನಿಟ್ಟಿನ ಕ್ರಮ ಅನಿವಾರ್ಯ ಹೀಗಾಗಿ ನಾಳೆಯಿಂದ ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಇದಕ್ಕಾಗಿ ಶೀಘ್ರವೇ ವ್ಯವಸ್ಥೆ ಮಾಡಲಾಗುವು. ಸರ್ಕಾರದ ಕಡೆಯಿಂದ ಪ್ರತಿ ಮನೆಗೆ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಎನ್ನುವ ಬಗ್ಗೆ ಈಗಾಗಲೇ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ಮಾಡುತ್ತಿದ್ದೇವೆ ಎಂದು ಸಂಸದರು ತಿಳಿಸಿದ್ದಾರೆ.

Comments are closed.