ಮಂಗಳೂರು : ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಂಸದರು ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಪ್ರಮುಖ ನಿರ್ಧಾರಗಳು:
ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ನಗರದ ಸೆಂಟ್ರಲ್ ಮಾರ್ಕೆಟ್ ನಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಮಾತ್ರ ದಿನಸಿ ವಸ್ತುಗಳ ಖರೀದಿಗೆ ಅವಕಾಶ. ಯಾವುದೇ ಕಾರಣಕ್ಕೂ ಸಾರ್ವಜನಿಕರು ವಸ್ತುಗಳನ್ನು ಖರೀದಿಸುವಂತಿಲ್ಲ.
ಉಳಿದಂತೆ ದಿನಸಿ ಅಂಗಡಿಗಳಲ್ಲಿ ಬೆಳಗ್ಗೆ 6 ರಿಂದ 12:00 ತನಕ ಅಗತ್ಯವಸ್ತುಗಳನ್ನು ಖರೀದಿಸಬಹುದಾಗಿದೆ.
ಪ್ರಧಾನಿ ಮೋದಿಯವರು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದನ್ನು ಯಶಸ್ವಿಗೊಳಿಸಿ ಕೊರೊನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅತ್ಯಗತ್ಯ.
Comments are closed.