ದ.ಕ. ಜಿಲ್ಲೆಯ ಮೊದಲ ಪ್ರಕರಣ :
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕರೋನಾ ಗೆದ್ದು ಊರಿಗೆ ತಲುಪಿದ ಯುವಕ
ಮಂಗಳೂರು ಎಪ್ರಿಲ್ 06 :ದಕ್ಷಿಣಕನ್ನಡಜಿಲ್ಲೆಯಲ್ಲಿ ಪ್ರಪ್ರಥಮಕರೋನಾ ಪ್ರಕರಣ ವರದಿಯಾಗಿದ್ದ ಭಟ್ಕಳದ ಯುವಕ ಸಂಪೂರ್ಣಗುಣಮುಖನಾಗಿ ಸೋಮವಾರ ಮುಂಜಾನೆತ ನ್ನಊರಿಗೆ ತೆರಳಿದರು.
ವಿದೇಶದಲ್ಲಿಉದ್ಯೋಗದಲ್ಲಿದ್ದ ಈ ಯುವಕನು ಮಾರ್ಚ್ 19ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದನು. ಅಲ್ಲಿತಪಾಸಣೆ ಸಂದರ್ಭರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿಅಲ್ಲಿಂದಲೇ ಅಂಬ್ಯುಲೆನ್ಸ್ನಲ್ಲಿ ವೆನ್ಲಾಕ್ಆಸ್ಪತ್ರೆಗೆದಾಖಲಿಸಲಾಗಿತ್ತು.ಯುವಕನಗಂಟಲ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿ, ಮಾ.22 ರಂದೊಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.
ಬಳಿಕ ವೆನ್ಲಾಕ್ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ನಂತರ ವ್ಯಕ್ತಿಯಆರೋಗ್ಯದಲ್ಲಿ ದಿನೇದಿನೇ ಚೇತರಿಕೆ ಕಂಡುಬಂದಿದ್ದು, ಸಂಪೂರ್ಣಗುಣಮುಖನಾಗಿ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ, ಭಟ್ಕಳಕ್ಕೆ ತೆರಳಿದ ಯುವಕನು, ಸದ್ಯ ಮನೆಯಲ್ಲಿಯೂ ಪ್ರತ್ಯೇಕವಾಗಿ ಇರಲಿದ್ದಾರೆ.
ಜಿಲ್ಲೆಯ ಪ್ರಥಮ ಪ್ರಕರಣ ಇದಾಗಿದ್ದರಿಂದ ಜಿಲ್ಲಾಡಳಿತವು ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಂಡಿತು.ಅದರಲ್ಲೂ ವೆನ್ಲಾಕ್ಆಸ್ಪತ್ರೆಗೆಇದೊಂದು ಸವಾಲಿನ ಪ್ರಕರಣವಾಗಿತ್ತು.
ರೋಗಿಯನ್ನು ಸಂಪೂರ್ಣವಾಗಿ ಪ್ರತ್ಯೇಕವಾಗಿಡುವುದರೊಂದಿಗೆರೋಗಕ್ಕೆ ಚಿಕಿತ್ಸೆ ನೀಡುವುದೂಕೂಡಾ ಮಹತ್ವದ್ದಾಗಿತ್ತು. ಈ ನಿಟ್ಟಿನಲ್ಲಿ ವೆನ್ಲಾಕ್ಅಧೀಕ್ಷಕರು, ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗಳು ತಮ್ಮ ಪೂರ್ಣ ಸೇವೆಯನ್ನು ಮೀಸಲಿಟ್ಟು, ಅಂತಿಮವಾಗಿರೋಗಿಯನ್ನು ಗುಣಮುಖಗೊಳಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಈ ಮೂಲಕ, ಜಗತ್ತನ್ನೇ ನಲುಗಿಸಿರುವ ಕರೋನಾ ಸಾಂಕ್ರಾಮಿಕ ಕಾಯಿಲೆ ವಿರುದ್ಧ ವೆನ್ಲಾಕ್ ಹಾಗೂ ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಮೊದಲ ಯಶಸ್ಸುದೊರಕಿದೆ.
ಬೆಳ್ಳಂಬೆಳಿಗ್ಗೆ ಊರಿನತ್ತ:
ಕರೋನಾದಿಂದಗುಣಮುಖನಾದ ಭಟ್ಕಳದ 22ರ ಹರೆಯದ ಈ ಯುವಕನು, ಸೋಮವಾರ ಬೆಳಿಗ್ಗೆ ತನ್ನಊರಿನತ್ತ ತೆರಳಿದನು. ಹೋಗುವಾಗ, ಯುವಕನು ಇಷ್ಟು ದಿನ ವೆನ್ಲಾಕ್ನಲ್ಲಿತನಗೆಚಿಕಿತ್ಸೆ ನೀಡಿ, ಎಲ್ಲಾಅಗತ್ಯ ಸೌಲಭ್ಯಗಳನ್ನು ಒದಗಿಸಿದ ವೆನ್ಲಾಕ್ ವೈದ್ಯರಿಗೆ, ಸಿಬ್ಬಂದಿಗಳಿಗೆ ಗೌರವಿಸಿದನು. ಹಾಗೆಯೇ ವೈದ್ಯರ ಬಳಿ ಭಾವುಕನಾಗಿ ನಿಂತನು.
ದುಬೈಯಲ್ಲಿ ಕಳೆದ 2 ವರ್ಷಗಳಿಂದ ಬ್ರಾಂಡೆಡ್ ವಾಚ್ ವ್ಯಾಪಾರ ಮಾಡುತ್ತಿದ್ದ ಈ ಯುವಕನು, ವೆನ್ಲಾಕ್ನಲ್ಲಿ ತನಗೆಉತ್ತಮ ಗುಣ ಮಟ್ಟದ ಚಿಕಿತ್ಸೆ ನೀಡಲಾಗಿದೆ.ತನ್ನನ್ನು ಬಹಳ ಪ್ರೀತಿಯಿಂದ ಇಲ್ಲಿ ಕಾಣಲಾಯಿತು. ಯಾವುದೇ ಸಮಸ್ಯೆಯಾಗದಂತೆ ಇಷ್ಟು ದಿನ ನೋಡಿ ಕೊಳ್ಳಲಾಗಿದೆ. ತಿನ್ನಲು ಉತ್ತಮ ಆಹಾರವನ್ನೂ ನೀಡಲಾಗಿದೆ ಎಂದು ತನ್ನ ಸಂತೋಷ ಹಂಚಿಕೊಂಡನು.
ನನಗೆ ಈ ರೋಗ ಹೇಗೆ ಬಂತು ಎಂಬ ನಿಖರಕಾರಣ ತಿಳಿದಿಲ್ಲ ಎಂದು ಸ್ಪಷ್ಟಪಡಿಸುತ್ತಾ, ಪಾಸಿಟಿವ್ ದೃಢಪಟ್ಟನಂತರ, ನಾನೇ ಎಲ್ಲರಿಂದಲೂ ಸಂಪೂರ್ಣ ಅಂತರ ಕಾಯ್ದುಕೊಂಡೆ ಎಂದು ಯುವಕ ಹೇಳಿದರು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಕರೋನಾ ಬಗ್ಗೆ ಸಾಕಷ್ಟು ಭಯಭೀತಿ ಮೂಡಿಸುವಂತೆ ಮಾಡಲಾಗುತ್ತಿದೆ ಎಂದು ಆ ಯುವಕನು ಅಸಮಾಧಾನ ವ್ಯಕ್ತಪಡಿಸಿದನು.
ಕರೋನಾ ವೈರಸ್ ನಮ್ಮದೇಹ ಪ್ರವೇಶಿಸುವುದು ಗೊತ್ತಾಗುವಾಗ ಹಲವು ದಿನಗಳು ಕಳೆದಿರುತ್ತದೆ. ನಮ್ಮ ಓಡಾಟ ನಿಯಂತ್ರಿಸುವುದು ಪ್ರಾಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಲಾಕ್ಡೌನ್ ಸರಕಾರದ ದಿಟ್ಟ ಹೆಜ್ಜೆಯಾಗಿದ್ದು, ಸರಕಾರದ ನಿರ್ದೇಶನದಂತೆಎಲ್ಲರೂ ಮನೆಯೊಳಗೆ ಇರುವುದುಅಗತ್ಯವಾಗಿದೆ. ನಾನು ವಿಮಾನ ನಿಲ್ದಾಣದಿಂದಲೇ ನೇರವಾಗಿ ಆಸ್ಪತ್ರೆಗೆ ದಾಖಲಾಗಿದ್ದರಿಂದ, ಊರಿಗೆ ತೆರಳಿ ಬಳಿಕ ಕುಟುಂಬಸ್ಥರಿಗೆ, ಊರಿನವರಿಗೆ ರೋಗ ಹರಡುವುದು ತಪ್ಪಿತು.ಇದಕ್ಕಾಗಿ ಜಿಲ್ಲಾಡಳಿತಕ್ಕೆ ತಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಯುವಕ ಹೇಳಿದನು.
ಕರೋನಾರೋಗಕ್ಕೆ ಹೆದರುವಅಗತ್ಯವಿಲ್ಲ. ಆತ್ಮವಿಶ್ವಾಸ ಮುಖ್ಯವಾಗಿದೆ.ರೋಗಿಯು ಪ್ರತ್ಯೇಕವಾಗಿರುವುದು ಅಗತ್ಯ. ಒಬ್ಬಂಟಿಯಾಗಿರುವುದಕ್ಕೆ ಹೆದರುವಅಗತ್ಯವಿಲ್ಲ. ಯಾವುದೇಕಾರಣಕ್ಕೂಆತ್ಮವಿಶ್ವಾಸ ಕಳೆದು ಕೊಳ್ಳ ಬಾರದು, ಸೋಂಕಿನ ವಿರುದ್ಧ ಹೋರಾಡಲು ನಮ್ಮಲ್ಲಿಧೈರ್ಯ ಮುಖ್ಯವಾಗಿದೆ ಎಂದರು.
ವೈದ್ಯರಚಿಕಿತ್ಸೆ, ದೇವರಅನುಗ್ರಹದಿಂದ ಇದೀಗ ತನ್ನಆರೋಗ್ಯ ಸಾಮಾನ್ಯ ಸ್ಥಿತಿಗೆ ಬಂದಿದೆ. ವೆನ್ಲಾಕ್ ಆಸ್ಪತ್ರೆ ಯವೈದ್ಯರ, ಸಿಬ್ಬಂದಿಗಳ ನಿರಂತರಆರೈಕೆ ಪರಿಣಾಮ ತಾನು ಗುಣಮುಖನಾಗುವಂತಾಯಿತು ಎಂದು ಸೋಂಕನ್ನು ಗೆದ್ದು ಬಂದ ಬಗ್ಗೆಅವರು ಹೇಳಿದರು.
Comments are closed.