ಕರಾವಳಿ

ಮಂಗಳೂರು: ಕೊರೋನ ಪೀಡಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು- ವ್ಯಾಪಕ ಶ್ಲಾಘನೆ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು: ಬಿಕರ್ನಕಟ್ಟೆ -ಶಕ್ತಿನಗರ ರಸ್ತೆಯಲ್ಲಿರುವ ಸೌಜನ್ಯ ಲೇನ್ ನಿವಾಸಿಯು ತೊಕ್ಕೊಟ್ಟಿನ ಕೊರೋನ ಪೀಡಿತ ವ್ಯಕ್ತಿಯ ಸಂಪರ್ಕವನ್ನು ಹೊಂದಿದ್ದ ಮಾಹಿತಿಯನ್ನು ಪಡದಿದ್ದ ಸ್ಥಳೀಯರು ಮಂಗಳೂರು ಕಂಕನಾಡಿ ಟೌನ್ ಪೊಲೀಸು ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿದಾಗ ಕೂಡಲೇ ಸ್ಪಂದಿಸಿದ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸಂತೋಷ್ ಸಿ. ಜೆ. ಇವರು ತಮ್ಮ ಸಿಬ್ಬಂದಿಯ ಜೊತೆಗೆ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದರು.

ಸದರಿ ವ್ಯಕ್ತಿಯು ಜ್ವರದಿಂದ ಬಳಲುತ್ತಿದ್ದರು. ಕೂಡಲೇ ಕಂಕನಾಡಿ ಪೊಲೀಸರು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡುವ ವ್ಯವಸ್ಥೆ ಮಾಡಿ ನೆರೆಹೊರೆಯ ವ್ಯಕ್ತಿಗಳಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಬರವಸೆ ನೀಡಿದರು.

ದೂರು ಪಡೆದ ಕೂಡಲೇ ಮಂಗಳೂರು ಪೊಲೀಸ್ ಕಮಿಶನರೇಟ್ ವ್ಯಾಪ್ತಿಯ ಮಂಗಳೂರು ಕಂಕನಾಡಿ ಟೌನ್ ಪೊಲೀಸರ ಸ್ಪಂದನೆಯು ಪದವು ಗ್ರಾಮದ ಬಿಕರ್ನಕಟ್ಟೆ ಪರಿಸರದ ನಿವಾಸಿಗಳಿಂದ ತುಂಬಾ ಮೆಚ್ಚುಗೆಗೆ ಪಾತ್ರವಾಯಿತು.

Comments are closed.