ಕರಾವಳಿ

ಜಿಲ್ಲಾಡಳಿತದಿಂದ ಅಂಬೇಡ್ಕರ್​ ಅವರ 129ನೇ ಜಯಂತಿ ಆಚರಣೆ 

Pinterest LinkedIn Tumblr

ಮಂಗಳೂರು, ಎಪ್ರಿಲ್.14:ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್​ ಅಂಬೇಡ್ಕರ್​ ಅವರ 129ನೇ ಜಯಂತಿಯಂದು ಇಂದು ಮಂಗಳೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಯವರು ದೀಪ ಬೆಳಗಿಸಿ ನಂತರ ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ,ಎಂಪಿ ನಳಿನ್ ಕುಮಾರ್ ಕಟೀಲ್,ಶಾಸಕರಾದ ವೇದವ್ಯಾಸ ಕಾಮತ್,ಡಾಕ್ಟರ್ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧು ರೂಪೇಶ,ಜಿ. ಪಂ.ಕಾರ್ಯನಿರ್ವಹಣಾ ಅಧಿಕಾರಿ ಸೆಲ್ವಮನಿ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡ್,ಉಪಾಧ್ಯಕ್ಷೆ ಕಸ್ತೂರಿ ಪಂಜ,ಎಸ್ಪಿ ಲಕ್ಷ್ಮಿ ಪ್ರಸಾದ್ ಉಪಸ್ಥಿತರಿದ್ದರು.

Comments are closed.