ಕರಾವಳಿ

ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದವಿಕ್ರಂ ಗಟ್ಟಿ ಮೃತದೇಹ ಉಳ್ಳಾಲದಲ್ಲಿ ಪತ್ತೆ

Pinterest LinkedIn Tumblr

ಮಂಗಳೂರು / ಉಳ್ಳಾಲ, ಎಪ್ರಿಲ್.17: ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೊಣಾಜೆ ಪುಳಿಂಚ ನಿವಾಸಿ ವಿಕ್ರಂ ಗಟ್ಟಿ (35) ಮೃತದೇಹ ಶುಕ್ರವಾರ ಬೆಳಗ್ಗೆ ಉಳ್ಳಾಲ ಹೊಯ್ಗೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್,ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ ಭೇಟಿ ನೀಡಿದ್ದಾರೆ.

ಮೂಲತಃ ಸೋಮೇಶ್ವರ ಸಮೀಪದ ಕೊಲ್ಯದ ಪ್ರಸಕ್ತ ಕೊಣಾಜೆ ಪುಳಿಂಚಾಡಿ ನಿವಾಸಿ ವಿಕ್ರಮ್ ಗಟ್ಟಿ(35)ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಸಮೀಪದ ‘ಉಳ್ಳಾಲ ನೇತ್ರಾವತಿ ಸೇತುವೆ’ ಮೇಲೆ ಬಾಗಿಲು ತೆರೆದ ಸ್ಥಿತಿಯಲ್ಲಿ ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು.

ಅವರ ಮೃತದೇಹ ಇಂದು ಬೆಳಗ್ಗೆ ಉಳ್ಳಾಲ ಹೊಯ್ಗೆಯ ನದಿ ತೀರದಲ್ಲಿ ಪತ್ತೆಯಾಗಿದೆ. ಇದೊಂದು ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಎಪ್ರಿಲ್15 ರ ಬುಧವಾರ ರಾತ್ರಿ ನೇತ್ರಾವತಿ ಸೇತುವೆ ಬಳಿ ಹೆಡ್ ಲೈಟ್ ಉರಿಸಿ ಬಾಗಿಲು ತೆರೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ.

ಸೋಮೇಶ್ವರ ಕೊಲ್ಯದವರಾಗಿರುವ ವಿಕ್ರಂ ಐದು ವರ್ಷಗಳ ಹಿಂದೆ ಕೈರಂಗಳದ ಪ್ರತಿಕ್ಷಾ ಅವರನ್ನು ವಿವಾಹವಾಗಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ಕೊಣಾಜೆಯ ಪುಳಿಂಚಾಡಿ ಬಳಿ ಪತ್ನಿ ಪ್ರತಿಕ್ಷಾ ಅವರ ಪಿತ್ರಾರ್ಜಿತ ಆಸ್ತಿ ದೊರೆತ ಹಿನ್ನಲೆಯಲ್ಲಿ ಅಲ್ಲೇ ಮನೆ ನಿರ್ಮಿಸಿ ಕುಟುಂಬ ಸಮೇತ ವಾಸವಾಗಿದ್ದರು. ಈ ದಂಪತಿ ನಾಲ್ಕು ವರ್ಷದ ಪುತ್ರನಿದ್ದಾನೆ.

ವಿಕ್ರಂ ಗಟ್ಟಿ ಕೊಲ್ಯದಲ್ಲಿ ಗ್ಯಾರೇಜ್ ನಡೆಸುತ್ತಿದ್ದರು. ಎ.15ರಂದು ರಾತ್ರಿ ಪುಳಿಂಚಾಡಿಯ ಮನೆಯಲ್ಲಿ ವಿಕ್ರಮ್‌ರ ಪತ್ನಿಯ ತಂದೆ, ತಾಯಿ ಹಾಗೂ ಪತ್ನಿ, ಮಗು ಇದ್ದರು ಎನ್ನಲಾಗಿದೆ.

9 ಗಂಟೆಗೆ ಟಿವಿ ವೀಕ್ಷಿಸುತ್ತಿದ್ದಾಗ ದಿಢೀರನೆ ಕಾರಿನ ಬ್ಯಾಟರಿ ರೀಚಾರ್ಜ್ ಮಾಡುವ ಉದ್ದೇಶಕ್ಕಾಗಿ ಕೊಣಾಜೆ ಪದವು ತನಕ ಹೋಗಿ ಬರುತ್ತೇನೆಂದು ಹೇಳಿ ವಿಕ್ರಮ್ ಮನೆಯಿಂದ ಹೊರಟಿದ್ದರೆನ್ನಲಾಗಿದೆ. ಬಳಿಕ ಮನೆ ಮಂದಿ ಕರೆ ಮಾಡಿದಾಗ ಅವರ ಮೊಬೈಲ್ ಪೋನ್ ಸ್ವಿಚ್ ಆಫ್ ಬರುತ್ತಿತ್ತು.

ವಿಕ್ರಂ ನಾಪತ್ತೆಯಾಗಿರುವ ಕುರಿತು, ವಿಕ್ರಂ ಅವರ ಸಹೋದರ‌ ಜೀವನ್ ಗಟ್ಟಿ ಕೊಣಾಜೆ ಠಾಣೆಗೆ ದೂರು ನೀಡಿದ್ದರು..ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Comments are closed.