ಕರಾವಳಿ

ಬೆಂಜನಪದವು: ಅಕ್ರಮ ಕಳ್ಳಭಟ್ಟಿ ಅಡ್ಡೆಗೆ ಅಬಕಾರಿ ದಾಳಿ -1200 ಲೀಟರ್ ಬೆಲ್ಲದ ಕೊಳೆ,500 ಲೀಟರ್ ನಕಲಿ ವೈನ್ ವಶ

Pinterest LinkedIn Tumblr

ಮಂಗಳೂರು : ಮಂಗಳೂರು ವಿಭಾಗದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ತಾಲೂಕಿ ಬೆಂಜನಪದವು ಬಳಿ ಅಕ್ರಮ ಕಳ್ಳಭಟ್ಟಿ ತಯಾರಿಸುವ ಅಡ್ಡೆಗೆ ಶನಿವಾರ ದಾಳಿ ನಡೆಸಿ 1200 ಲೀಟರ್ ಬೆಲ್ಲದ ಕೊಳೆ, 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶ್ರೀಮತಿ ಶೈಲಜಾ ಕೋಟೆ ರವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ರವರ ನೇತ್ರತ್ವದಲ್ಲಿ, ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕರು ಗೀತಾ ರವರ ,ಮಾಗದಶನದಂತ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರು ವಿಜಯ್ ಕುಮಾರ್ , ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಅಂಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕ್ರಿಸ್ಟನ್ ಡಿಸೋಜ ರವರ ಮನೆಯ ಹಿಂಭಾಗದಲ್ಲಿ 1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತು ಪಡಿಸಲಾಯಿತು.

ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ, ಸದರಿ ಪ್ರಕರಣವನ್ನು ಜಿಲ್ಲಾ ತಂಡದ ಅಬಕಾರಿ ಉಪ ನಿರೀಕ್ಷಕರು ಜಗನ್ನಾಥ ನಾಯ್ಕ ರವರು ದಾಖಲಿಸಿರುತ್ತಾರೆ

Comments are closed.