ಕರಾವಳಿ

ಮಂಗಳೂರು-ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿರುವ ಪಡೀಲ್‌ನ ಫಸ್ಟ್ ನ್ಯೂರೋ ಆಸ್ಪತ್ರೆ, ಸುತ್ತಮುತ್ತ ಪ್ರದೇಶ ‘ಸೀಲ್ ಡೌನ್’

Pinterest LinkedIn Tumblr

ಮಂಗಳೂರು, ಎಪ್ರಿಲ್. 23 ದ.ಕ. ಜಿಲ್ಲೆಯಲ್ಲಿ ಮಹಾಮಾರಿ ಕೊರೋನ ವೈರಸ್ ಗೆ ಇಂದು ಬಲಿಯಾದ ಬಂಟ್ವಾಳದ ಸುಮಾರು 75 ವರ್ಷ ವಯಸ್ಸಿನ ಮಹಿಳೆ ಈ ಮೊದಲು ಚಿಕಿತ್ಸೆ ಪಡೆದ ಪಡೀಲ್‌ನ ಫಸ್ಟ್ ನ್ಯೂರೋ ಆಸ್ಪತ್ರೆ, ಸುತ್ತಮುತ್ತ ಪ್ರದೇಶವನ್ನು ‘ಸೀಲ್ ಡೌನ್’ ಮಾಡಲಾಗಿದೆ.

ಮಂಗಳೂರಿನ ಪಡೀಲು ಬಳಿಯಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ 75 ವರ್ಷ ವಯಸ್ಸಿನ ವೃದ್ದೆಗೆ ಕೊರೋನ ಸೋಂಕು ತಗುಲಿ ಬಳಿಕ ವೆನ್ ಲಾಕ್ ಕೋವೀಡ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹಿನ್ನಲೆಯಲ್ಲಿ ಪಡೀಲ್ ನ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಆದೇಶ ಮಾಡಿದ್ದಾರೆ.

ಮೂರು ದಿನಗಳ ಹಿಂದೆ ಕೊರೋನ ವೈರಸ್ ಗೆ ಬಲಿಯಾದ ಬಂಟ್ವಾಳ ಪೇಟೆಯ ಮೃತ ಮಹಿಳೆಯ ಅತ್ತೆ (ಮಹಾಮಾರಿ ಕೊರೋನ ವೈರಸ್‌ನಿಂದ ಇಂದು ಮೃತಪಟ್ಟವರು) ಚಿಕಿತ್ಸೆ ಪಡೆಯುತ್ತಿದ್ದ ಪಡೀಲ್ ಸಮೀಪದ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸುವ ಮೂಲಕ ಎಲ್ಲಾ ಚಟುವಟಿಕೆಗಳಿಗೆ ದ.ಕ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೋನ್ಮೆಂಟ್ ಪ್ರದೇಶ ಘೋಷಣೆ ಮಾಡಲಾಗಿದೆ.

ಆಸ್ಪತ್ರೆ ಜೊತೆಗೆ ಸುತ್ತಮುತ್ತವಿರುವ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅಲ್ಲಿಂದ 5 ಕಿಲೋಮೀಟರ್ ಸುತ್ತಾಮುತ್ತಾ ಬಫರ್ ಝೋನ್ ಎಂದು ಘೋಷಣೆ ಮಾಡಲಾಗಿದ್ದು, ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್ ವರೆಗೂ ಈ ಬಫರ್ ಝೋನ್‌ ವ್ಯಾಪ್ತಿಗೆ ಬರಲಿದ್ದು, 42 ಸಾವಿರ ಮನೆ, 1800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರು ಬೋರ್ ಝೋನ್ ಅಡಿಯಲ್ಲಿ ಬರಲಿದ್ದಾರೆ.

ಈ ಆಸ್ಪತ್ರೆಗೆ ಹೊಂದಿಕೊಂಡಿರುವ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯವಾಗಿ ಘೋಷಿಸಲಾಗಿದೆ. ಹೀಗಿರುವಾಗ ಇನ್ಮುಂದೆ ಈ ವಲಯದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಮನೆಯಿಂದ ಯಾರು ಹೊರಗೆ ಹೋಗುವಂತಿಲ್ಲ, ಹಾಗೂ ಹೊರಗಡೆಯಿಂದ ಈ ಪ್ರದೇಶಕ್ಕೆ ಬರುವುದನ್ನು ಸಂಪೂರ್ಣ ತಡೆಹಿಡಿಯುವ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ.

ಸುಪರ್ವೈಸ್ಡ್ ಐಸೋಲೆಟೆಡ್ ಸೆಂಟರ್:

ಮುಂಜಾಗ್ರತಾ ಕ್ರಮವಾಗಿ ಸೋಂಕು ವ್ಯಾಪ್ತಿಸದಂತೆ ವೃದ್ಧೆ ಚಿಕಿತ್ಸೆಗೆ ದಾಖಲಾಗಿದ್ದ ಖಾಸಗಿ ಆಸ್ಪತ್ರೆಯನ್ನು “ಸುಪರ್ವೈಸ್ಡ್ ಐಸೋಲೆಟೆಡ್ ಸೆಂಟರ್” ಆಗಿ ಗುರುತಿಸಲಾಗಿದೆ. ಹೀಗಾಗಿ ಸೀಲ್ ಡೌನ್ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ, ಸಿಬ್ಬಂದಿ, ವೈದ್ಯರು, ನರ್ಸ್ ಸೇರಿದಂತೆ ಆಸ್ಪತ್ರೆಯಿಂದ ಹೊರಬರುವಂತಿಲ್ಲ. ಹಾಗೂ ಯಾರು ಕೂಡಾ ಒಳಹೋಗುವಂತಿಲ್ಲ. ಆಸ್ಪತ್ರೆಯಲ್ಲಿ ಸೀಲ್ ಡೌನ್ ವೇಳೆ ಇದ್ದವರಿಗೆ ಆಹಾರ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ತಿಳಿದುಬಂದಿದೆ.

Comments are closed.