ಕರಾವಳಿ

ಮಂಗಳೂರಿನಲ್ಲಿ ಡಾ.ರಾಜ್ ಕುಮಾರ್ ಜಯಂತಿ ಆಚರಣೆ

Pinterest LinkedIn Tumblr

ಮಂಗಳೂರು : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಮಂಗಳೂರು ವಾರ್ತಾ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಅವರು ಡಾ. ರಾಜ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನುಡಿ ನಮನ ಸಲ್ಲಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments are closed.