ಕರಾವಳಿ

ಪಂಪ್‌ವೆಲ್ ಮೇಲ್ಸೇತುವೆಯ ತಡೆಗೋಡೆಯಲ್ಲಿ ಬಿರುಕು : ಪ್ರತ್ಯೇಕ ತಂಡದಿಂದ ಪರಿಶೀಲನೆಗೆ ಸೂಚನೆ

Pinterest LinkedIn Tumblr

ಮಂಗಳೂರು : ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಪ್ರತ್ಯೇಕ ತಂಡ (ಥರ್ಡ್ ಪಾರ್ಟಿಯಿಂದ) ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಸದರಾದ ನಳಿನ್‌ಕುಮಾರ್ ಕಟೀಲ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಂಪ್‌ವೆಲ್ ಮೇಲ್ಸೇತುವೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಂಸದರು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮತ್ತು ತಜ್ಞ ಇಂಜಿನಿಯರ್‌ಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆ ಸಮತಟ್ಟುಗೊಳಿಸಿ ಮಣ್ಣು ಹಾಕಿದ ಬಳಿಕ ನಿರ್ಮಿಸಿದ ತಡೆಗೋಡೆಯಲ್ಲಿ ಸಣ್ಣ ಬಿರುಕು ಉಂಟಾಗಿತ್ತು. ಅದನ್ನು ತಕ್ಷಣ ದುರಸ್ತಿ ಪಡಿಸಲಾಗಿದೆ. ಇದರಿಂದ ಮೇಲ್ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಕಾಮಗಾರಿಯಲ್ಲಿ ಏನಾದರೂ ಲೋಪ ಉಂಟಾಗಿದೆಯೆ? ಎಂಬುವ ಬಗ್ಗೆ ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸಂಸದರು ಸೂಚಿಸಿದರು.

Comments are closed.