ಕರಾವಳಿ

ದ.ಕ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅಧಿಕಾರ ಸ್ವೀಕಾರ

Pinterest LinkedIn Tumblr

ಮ೦ಗಳುಾರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಶ್ರೀ ಬಿ. ಮುರಳೀಧರ್ ಪೈ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ದಿನಾಂಕ 27.4.2020 ರ೦ದು ಕನಾ೯ಟಕ ಹೈಕೋರ್ಟ್ ಹೊರಡಿಸಿದ ವಗಾ೯ವಣಾ ಆದೇಶದನ್ವಯ ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಬೀದರ್ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆಗೊಂಡ ಪ್ರಯುಕ್ತ ದಿನಾಂಕ 30.4.2020 ರಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀಮತಿ ಶಾರದಾ ಬಿ. ಇವರಿಗೆ ಹುದ್ದೆಯ ಪ್ರಭಾರವನ್ನು ಹಸ್ತಾಂತರಿಸಿದ್ದರು.

ಕರ್ನಾಟಕ ಹೈಕೋರ್ಟ್ ನ ಕಲಬುರ್ಗಿ ಪೀಠದಲ್ಲಿ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಮುರಳೀಧರ್ ಪೈ ಬಿ. ಇವರು ಮಾನ್ಯ ಕನಾ೯ಟಕ ಹೈಕೋರ್ಟ್ ನ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆಗೊಂಡಿದ್ದು ಇಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀಮತಿ ಶಾರದಾ ಬಿ. ಅವರಿಂದ ಅಧಿಕಾರ ಸ್ವೀಕರಿಸಿದರು.

ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ಶ್ರೀ ಬಿ. ಮುರಳೀಧರ್ ಪೈ ಅವರು ಈ ಹಿಂದೆ ಸೇವೆ ಸಲ್ಲಿಸಿದ್ದಾರೆ

Comments are closed.