ಕರಾವಳಿ

ನಾಳೆ ಮಂಗಳೂರಿಗೆ ಮೊದಲ ವಿಮಾನ ಆಗಮನ : ಏರ್ ಪೋರ್ಟ್‌ಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

Pinterest LinkedIn Tumblr

ಮಂಗಳೂರು, ಮೇ.11: ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದೆ.

ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.