ಕರಾವಳಿ

ದ.ಕ.ಜಿಲ್ಲೆಯಲ್ಲಿ ಮೇ 31ರವರೆಗೆ ನಿಷೇದಾಜ್ಞೆ: 144 (3) ಸೆಕ್ಷನ್ ಜಾರಿ

Pinterest LinkedIn Tumblr

ಮಂಗಳೂರು ಮೇ 20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರನ್ವಯ ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 18 ರಿಂದ ಮೇ 31 ರವರೆಗೆ ನಿಷೇದಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ.

Comments are closed.