ಕರಾವಳಿ

ದ.ಕ.ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ : ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು

Pinterest LinkedIn Tumblr

ಮಂಗಳೂರು/ ಬೆಳ್ತಂಗಡಿ, ಮೇ 25 : ಹೃದಯ ಸಂಬಂಧಿ ಖಾಯಿಲೆಯಿಂದಾಗಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದೀಗ ಮೃತಪಟ್ಟ ಬಳಿಕ ಇವರಿಗೆ ಕೊರೊನಾ ಸೋಂಕು ಪಾಸಿಟಿವ್‌ ದೃಢಪಟ್ಟಿದೆ.

ಬೆಳ್ತಂಗಡಿ ಮೂಲದ ಈ ವ್ಯಕ್ತಿಯನ್ನು ಹೃದಯ ಸಂಬಂಧಿ ಖಾಯಿಲೆಯಿಂದಾಗಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂದರ್ಭ ಅವರಲ್ಲಿ ಕೊರೋನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಿದ್ದರು.

ಇದೀಗ ಇಂದು ಅವರು ಮೃತಪಟ್ಟಿದ್ದು, ಮೃತಪಟ್ಟ ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌ ವರದಿ ಬಂದಿದೆ. ಇದರಿಂದ ಅವರ ವಾಸಸ್ಥಳ ಸೇರಿದಂತೆ ಅವರು ಎಲ್ಲಿಗೆಲ್ಲಾ ಹೋಗಿದ್ದಾರೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ.

Comments are closed.