ಕರಾವಳಿ

ಬೆಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದ ದ.ಕ. ಜಿಲ್ಲೆಯ ಮೂವರಿಗೆ ಪಾಸಿಟಿವ್

Pinterest LinkedIn Tumblr

ಮಂಗಳೂರು, ಮೇ,.25: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂವರು ಬೆಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದ ಕಾರಣದಿಂದಾಗಿ ಅವರನ್ನು ಅಲ್ಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕತಾರ್‌ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಅವರು ಬೆಂಗಳೂರಿನಲ್ಲಿಯೇ ಕ್ವಾರಂಟೈನ್‌ನಲ್ಲಿದ್ದರು. ಕತಾರ್‌ನಿಂದ ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ಬೆಂಗಳೂರಿಗೆ ಬಂದ ಬಳಿಕ ಅವರನ್ನು ಅಲ್ಲೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.

Comments are closed.