ಕರಾವಳಿ

ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷರಿಂದ ಕಸದಿಂದ ಹಾನಿಗೀಡಾದ ಮಂದಾರ ಪರಿಸರದ ಕಾಮಗಾರಿ ಪರಿಶೀಲನೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಶ್ರೀಮತಿ ಪೂರ್ಣಿಮಾ ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಭೇಟಿ ನೀಡಿ, ಬಳಿಕ ಕಳೆದ ಬಾರಿ ಮಳೆಗಾಲದಲ್ಲಿ ಕಸದಿಂದ ಹಾನಿಗೀಡಾದ ಮಂದಾರ ಪರಿಸರದಲ್ಲಿ ನಡೆಯುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಸಂಗೀತಾ ಆರ್ ನಾಯಕ್, ಮ ನ ಪಾ ಸದಸ್ಯರಾದ ಚಂದ್ರಾವತಿ ವಿಶ್ವನಾಥ್, ಲೀಲಾವತಿ ಪ್ರಕಾಶ್, ಮ ನ ಪಾ ಅಧಿಕಾರಿಗಳಾದ ಮಧು,ರಾಜೇಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.